Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯದ ಕಡೆಗೂ ಗಮನ ನೀಡಿ :  ಡಾ.ರೂಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ದೈಹಿಕ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟಂತೆ ಮಾನಸಿಕ ಆರೋಗ್ಯಕ್ಕೂ ಪ್ರಾಧಾನ್ಯತೆ ನೀಡಿದಾಗ ಮಾತ್ರ ಪ್ರತಿಯೊಬ್ಬರು ಆರೋಗ್ಯದಿಂದಿರಲು ಸಾಧ್ಯ ಎಂದು ಡಾ.ರೂಪ ಕರೆ ನೀಡಿದರು.

ನೆಹರು ಯುವ ಕೇಂದ್ರ, ಆದರ್ಶ ಯುವಕ ಸಂಘ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ದೈಹಿಕ ಆರೋಗ್ಯದ ಕಡೆ ಎಲ್ಲರೂ ಗಮನ ಹರಿಸುವುದು ಸಹಜ. ಆದರೆ ಮಾನಸಿಕವಾಗಿ ಆರೋಗ್ಯ ಸರಿಯಾಗಿರದಿದ್ದರೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದು ಹೇಳಿದರು.

ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ ಮಾತನಾಡಿ ಶಾರೀರಿಕ, ಮಾನಸಿಕ, ಸಾಮಾಜಿಕವಾಗಿ ಸದೃಡರಾಗಿರುವುದೇ ನಿಜವಾದ ಆರೋಗ್ಯ. 1992 ರಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆರಂಭಿಸಲಾಯಿತು. ವಿಶ್ವದಲ್ಲಿ ಜನರು ಖಿನ್ನತೆಯಿಂದ ಬಳಲಿ ಆತ್ಮಹತ್ಯೆ ಮಾಡಿಕೊಳ್ಳುವಂತ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವ. ವಿಶ್ವ ಆರೋಗ್ಯ ಸಂಸ್ಥೆ ಅಂಕಿ ಅಂಶಗಳ ಪ್ರಕಾರ ಪ್ರತಿ ವರ್ಷ ಸುಮಾರು ಎಂಟು ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಾನಸಿಕವಾಗಿ ಬಳಲುತ್ತಿರುವವರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಾಗ ದೊಡ್ಡಮಟ್ಟದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟಬಹುದು ಎಂದರು.

ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹಾದೇವಿ ಮರಕಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ರೋ.ಈ.ಅರುಣ್‍ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ರೆಡ್‍ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಮಜಹರ್‍ವುಲ್ಲಾ, ಆದರ್ಶ ಯುವಕ ಸಂಘದ ಕಾರ್ಯದರ್ಶಿ ಓಂಕಾರಮ್ಮ, ಆರೋಗ್ಯ ಇಲಾಖೆಯ ವೆಂಕಟೇಶ್, ಬಂಧಿಖಾನೆಯ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!