ಶೀಘ್ರದಲ್ಲೇ ಸಾರಿಗೆ ಸಿಬ್ಬಂದಿಗೆ ವೇತನ ಪರಿಷ್ಕರಣೆ‌ : ಸಾರಿಗೆ ಸಚಿವ ಬಿ.ಶ್ರೀರಾಮುಲು

1 Min Read

 

ಚಿತ್ರದುರ್ಗ, (ಡಿ.06) :  ಸಾರಿಗೆ ನೌಕರರ ಬಹುದಿನದ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ.

ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು,  ಆದಷ್ಟು ಶೀಘ್ರವಾಗಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಹಿರಿಯೂರು ನಗರದ ಹುಳಿಯಾರ ರಸ್ತೆಯ ತಾಲ್ಲೂಕು ಕ್ರೀಡಾಂಗಣದ ಹತ್ತಿರ ಮಂಗಳವಾರ ನೂತನ ಬಸ್ ಘಟಕದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ಹಿಂದೆ‌ 2015-16 ನೇ ಸಾಲಿನಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಆದರೆ ಇಲ್ಲಿಯವರೆಗೂ ವೇತನ ಪರಿಷ್ಕರಣೆ ಆಗಿರುವುದಿಲ್ಲ‌. ಸಾರಿಗೆ ಸಿಬ್ಬಂದಿ ಯೂನಿಯನ್‌ಗಳು ಈ ಕುರಿತು ಗಮನ ಸೆಳೆದಿವೆ. ಸರ್ಕಾರ ಸಿಬ್ಬಂದಿ ವೇತನ ಪರಿಷ್ಕರಣೆ ಸಿದ್ದವಿದೆ. ಸರ್ಕಾರದಿಂದ ಸಾರಿಗೆ ಸಿಬ್ಬಂದಿಗೆ ರೂ.1ಕೋಟಿ‌ ಮೊತ್ತದ ಜೀವವಿಮೆ ನೀಡಲಾಗಿದೆ. ನೌಕರರು ಕರ್ತವ್ಯದ ವೇಳೆ ಅಥವಾ ಅನ್ಯ ಸಂದರ್ಭದಲ್ಲಿ ಮೃತರಾದರೆ ವಿಮೆ ಪಾವತಿಸಲಾಗುವುದು ಎಂದರು.

Share This Article
Leave a Comment

Leave a Reply

Your email address will not be published. Required fields are marked *