‘ಪೆಂಟಗನ್’ ಸಿನಿಮಾದಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನವಾಗಿದೆ : ರೂಪೇಶ್ ರಾಜಣ್ಣ ಆಕ್ರೋಶ..!

Facebook
Twitter
Telegram
WhatsApp

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ರೂಪೇಶ್ ರಾಜಣ್ಣ ಮತ್ತೆ ಹೋರಾಟ ಶುರು ಮಾಡಿದ್ದಾರೆ. ಇತ್ತಿಚೆಗಷ್ಟೇ ಕಿಶೋರ್ ನಟನೆಯ ಪೆಂಟಗನ್ ಸಿನಿಮಾದ ಐದನೇ ಕಥೆಯ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ನೋಡಿದ ರೂಪೇಶ್ ರಾಜಣ್ಣ, ವೇದಿಕೆ ಮೇಲೆಯೇ ಗರಂ ಆಗಿದ್ದಾರೆ.

ಪೆಂಟಗನ್ ಸಿನಿಮಾದಲ್ಲಿ ಕನ್ನಡಪರ ಹೋರಾಟಗಾರರ ಕಥೆ ಇದೆ. ಈ ಟೀಸರ್ ನಲ್ಲಿ ಕನ್ನಡಪರ ಹೋರಾಟಗಾರರ ಬಗ್ಗೆ ಹಲವು ಪದಗಳನ್ನು ಬಳಕೆ ಮಾಡಲಾಗಿದೆ. ರೋಲ್ ಕಾಲ್ ಶಬ್ದ ಬಳಕೆಯಾಗಿದೆ. ಇದಕ್ಕೆ ರೂಪೇಶ್ ರಾಜಣ್ಣ ವಿರೋಧ ವ್ಯಕ್ತಪಡಿಸಿದ್ದು, ನಟಿ, ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಎ ಕೂಡ ವಿರೋಧಿಸಿದ್ದಾರೆ.

ವಿರೋಧಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಗುರು ದೇಶಪಾಂಡೆ, ಟೀಸರ್ ನೋಡಿಯೇ ಎಲ್ಲದನ್ನು ತೀರ್ಮಾನಿಸಬೇಡಿ. ಸಿನಿಮಾ ಬಂದ ಮೇಲೆ ಅದರ ಒಳಗೆ ಏನಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಟೀಸರ್ ನಲ್ಲಿ ಏನೆ ಮಾತನಾಡಿಸಿದರೂ, ಸಿನಿಮಾದಲ್ಲಿ ಅದಕ್ಕೆ ಉತ್ತರ ಸಿಗಲಿದೆ. ಸಿನಿಮಾ ನೋಡಿದ ಮೇಲೆ ನಿಮ್ಮಲ್ಲಿ ಪ್ರಶ್ನೆಗಳಿದ್ದರೆ ಆಗ ಪ್ರತಿಭಟಿಸಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇಕದಾಟು ಅಣೆಕಟ್ಟು ನಿರ್ಮಾಣ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್.ಮುನಿಯಪ್ಪ

  ಚಿತ್ರದುರ್ಗ, ಸೆಪ್ಟೆಂಬರ್, 23 : ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿ ವರ್ಷ 177  ಟಿಎಂಸಿ ನೀರು ತಮಿಳುನಾಡಿಗೆ ನೀಡಬೇಕು. ಆದರೆ ಕಳೆದ ವರ್ಷ 600 ಟಿಎಂಸಿ ನೀರು ವೃಥಾ ಹರಿದು

ಕಾವೇರಿ ಕಿಚ್ಚು : ಚಿತ್ರದುರ್ಗದಲ್ಲಿ ಕರವೇ ಪ್ರವೀಣ್‍ಕುಮಾರ್ ಶೆಟ್ಟಿ ಬಣ ಪ್ರತಿಭಟನೆ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23  : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಹಾಗೂ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಶನಿವಾರ

ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ

error: Content is protected !!