Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಮೋಟೋ ಬೆಲೆ ಕೇಳಿನೆ ಜನ ಸುಸ್ತು : ಈರುಳ್ಳಿ ಕೂಡ ರೇಟ್ ಆಗಿದೆ..!

---Advertisement---

ಬೆಂಗಳೂರು: ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು.‌ ಈಗ ಮುಂಗಾರು ಮಳೆ ಚುರುಕುಗೊಂಡಿದೆ.‌ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಹೀಗಿರುವಾಗ ಮಾರುಕಟ್ಟೆಯಲ್ಲಿ ಟಮೋಟೋ ಬೆಲೆ ಗಗನಕ್ಕೇರಿದೆ. ಒಂದು ಕೆಜಿ ಟಮೋಟೋ ತೆಗೆದುಕೊಳ್ಳುವುದಕ್ಕೆ ಹೋದವರು ಶಾಕ್ ಆಗಿ 200-300 ಗ್ರಾಂ ತರುವಂತೆ ಆಗಿದೆ. ಟಮೋಟೋ ಬೆಲೆ ಕೇಳಿಯೇ ಶಾಕ್ ಆಗಿದ್ದಾರೆ.

ಒಂದು ಕೆಜಿ ಟಮೋಟೋ ಬೆಲೆ 100 ದಾಟಿದೆ. ಮಳೆ ಬರುತ್ತಿರುವ ಕಾರಣ ಟಮೋಟೋ ಬೆಳೆ ಕೈಗೆ ಸಿಗುತ್ತಿಲ್ಲ. ಹೀಗಾಗಿಯೇ ಟಮೋಟೋ ಬೆಲೆ ಹೆಚ್ಚಳವಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನು ಜಾಸ್ತಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರ ಜೊತೆಗೆ ಈರುಳ್ಳಿ ಬೆಲೆಯೂ ಕೆಜಿಗೆ 60 ರೂಪಾಯಿ ಆಗಿದೆ.

ಒಂದು ಕಡೆ ತೈಲ ಬೆಲೆ ಏರಿಕೆಯನ್ನೇ ಜನ ಸಹಿಸುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಈಗ ತರಕಾರಿ ಬೆಲೆಯೂ ಏರಿಕೆಯಾದರೆ ಮಧ್ಯಮವರ್ಗದ ಜನ ಬದುಕಯವುದಾದರು ಹೇಗೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಬರೀ ಟಮೋಟೋ, ಈರುಳ್ಳಿ ಮಾತ್ರವಲ್ಲ ಎಲ್ಲಾ ತರಕಾರಿಗಳ ಬೆಲೆಯೂ ಹೆಚ್ಚಳವಾಗಿದೆ. ಇದು ಗ್ರಾಹಕರ ಜೇಬಿಗೆ ಒಡೆತ ಬಿದ್ದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment