ಸಾಧನೆ ಮೇಲೆ ಅಲ್ಲ ಹಿಂದುತ್ವದ ಮೇಲೆ ಜನ ಮತ ಹಾಕುತ್ತಿದ್ದಾರೆ : ಸಿದ್ದರಾಮಯ್ಯ

suddionenews
1 Min Read

ಕಲಬುರಗಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮೋದಿ ರಾಜ್ಯವನ್ನ ಟಾರ್ಗೆಟ್ ಮಾಡಿದ್ರೆ ಅವರೇ ಸೋಲುತ್ತಾರೆ. ಜನ ಸಾಧನೆ ಮೇಲೆ ಮತ ಹಾಕೋದನ್ನ ಕಡಿಮೆ ಮಾಡಿದ್ದಾರೆ. ಹಿಂದುತ್ವದ ಆಧಾರದ ಮೇಲೆ ಮತ ಹಾಕುತ್ತಿದ್ದಾರೆ ಎಂದಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ಬಿಟ್ಟು ಹೋದ ಶಾಸಕರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಹೋದವರನ್ನ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ.‌ ನಾವೂ ಮತ್ತೆ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ಯಡಿಯೂರಪ್ಪ ಅವರು ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲವೆಂದು ಹೇಳಿದ್ದರು. ಈ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನ ತೆಗೆದಿದ್ದರು. ಆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಅತ್ತಿರಲಿಲ್ಲವಾ..? ಅವರನ್ನ ಜೈಲಿಗೆ ಹಾಕುವುದಾಗಿ ಹೆದರಿಸಿದ್ದಾರೆ. ಎರಡು ವರ್ಷದ ಅವಧಿಗೆ ಮಾತ್ರ ಅಂತ ಆಯ್ಕೆ ಮಾಡಲಾಗಿತ್ತು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *