Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೇಸಿಗೆಯ ರಜೆಯಲ್ಲೂ ಮೈಸೂರಿಗೆ ಬರ್ತಿಲ್ಲ ಜನ : ಕಾರಣವೇನು ಗೊತ್ತಾ..?

---Advertisement---

ಮೈಸೂರು: ಬೇಸಿಗೆ ರಜೆ ಬಂತು ಎಂದರೆ ಸಾಕು ಪೋಷಕರು ಮಕ್ಕಳನ್ನು ಕರೆದುಕೊಂಡು ಐತಿಹಾಸಿಕ ಸ್ಥಳಗಳಿಗೆ ಪ್ರವಾಸಕ್ಕೆಂದು ಹೊರಟು ಬಿಡುತ್ತಾರೆ. ಅದರಲ್ಲಿ ಮೈಸೂರು ಕೂಡ ಒಂದು. ಮಾಮೂಲಿ ದಿನದಲ್ಲಿಯೇ ಮೈಸೂರು ಅರಮನೆ ವಿಸಿಟ್ ಮಾಡುವ ಪ್ರವಾಸಿಗರ ಸಂಖ್ಯೆ 5 ಸಾವಿರ ಇರಲಿದೆ. ಆದರೆ ನಿನ್ನೆಯ ವೀಕೆಂಡ್ ನಲ್ಲಿ ಕೇವಲ 2,500 ಜನರ ದಾಖಲೆಯಾಗಿದೆ. ಈ ಮೂಲಕ ಸಾಕಷ್ಟು ಜನಸಂಖ್ಯೆ ಇಳಿಮುಖವಾಗಿದೆ.

ಇಷ್ಟೊಂದು ಇಳಿಮುಖವಾಗಿರುವುದಕ್ಕೆ ಹಲವು ಕಾರಣಗಳಿವೆ. ಬೇಸಿಗೆಯ ತಾಪ ಹೆಚ್ಚಾಗಿದೆ. ಹೀಗಾಗಿ ಹೊರಗೆ ಓಡಾಡುವುದಕ್ಕೂ ಜನ ಭಯ ಪಡುತ್ತಿದ್ದಾರೆ. ಮತ್ತೊಂದು ಕಡೆ ಲೋಕಸಭಾ ಚುನಾವಣೆ ಬೇರೆ ಬಂದಿದೆ. ಈಗಾಗಲೇ ಪ್ರಚಾರ ಕಾರ್ಯ ಶುರುವಾಗಿದೆ. ಹೆಚ್ಚಿನ ಸರ್ಕಾರಿ ನೌಕರರು ಚುನಾವಣಾ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣಾ ಕೆಲಸಕ್ಕೆ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಮಕ್ಕಳ ಜೊತೆಗಿನ ಪ್ರವಾಸಕ್ಕೆ ಸಮಯವೇ ಸಿಗುತ್ತಿಲ್ಲ.

ಮತ್ತೊಂದು ಕಡೆ ಈ ವರ್ಷ ಬೋರ್ಡ್ ಪರೀಕ್ಷೆಯ ಗೊಂದಲವೇ ಜಾಸ್ತಿ ಇತ್ತು. ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುತ್ತಾರಾ..? ಇಲ್ವಾ ಎಂಬ ಗೊಂದಲವೇ ಜಾಸ್ತಿ ಇತ್ತು. ಕೊನೆ ಗಳಿಗೆಯಲ್ಲಿ ಬೋರ್ಡ್ ಪರೀಕ್ಷೆಯನ್ನು ಅನೌನ್ಸ್ ಮಾಡಿದ್ದಾರೆ. ಇದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಕ್ಕಳಿಗೆ ಪ್ರಿಪೇರ್ ಮಾಡಬೇಕಾಗಿದೆ. ಸಮಯ ಕಡಿಮೆ ಇರುವುದರಿಂದ ಪ್ರವಾಸದ ಯೋಚನೆಯನ್ನು ಕೈ ಬಿಡಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿಯೇ ಮೈಸೂರು ಬಣಗುಡುತ್ತಿದೆ. ಪ್ರತಿ ದಿನ ತುಂಬಿ ತುಳುಕುತ್ತಿದ್ದ ಅರಮನೆ ಈಗ ಕಡಿಮೆ ಜನರಿಂದ ಕೂಡಿದೆ.. ಆದರೆ ಚಾಮುಂಡಿ ಬೆಟ್ಟಕ್ಕೆ ಮಾತ್ರ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...