Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಜನರೇ ಎಚ್ಚರ : ಕಸ ವಿಂಗಡಣೆ ಕಡ್ಡಾಯ, ನಿಯಮ ಉಲ್ಲಂಘಿಸಿದರೆ ನೀರು, ವಿದ್ಯುತ್ ಸಂಪರ್ಕ ಕಡಿತ.!

---Advertisement---

ಚಿತ್ರದುರ್ಗ. ಮೇ.19: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿತ್ರದುರ್ಗ ನಗರಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

 

ಕೇಂದ್ರ ಸರ್ಕಾರದ ‘ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026ರ ಅನ್ವಯ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ನಗರದ ಎಲ್ಲಾ ಸಾರ್ವಜನಿಕರು, ಮನೆಗಳು ಹಾಗೂ ವ್ಯಾಪಾರೋದ್ಯಮಿಗಳು ತಮ್ಮಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಗರಸಭೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು.
ಕಸವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇ ವೇಸ್ಟ್ ಎಂದು ಪ್ರತ್ಯೇಕಿಸಬೇಕಾಗುತ್ತದೆ. ಅಡುಗೆ ಮನೆಯ ತ್ಯಾಜ್ಯ, ತರಕಾರಿ, ಮಾಂಸದ ತ್ಯಾಜ್ಯ, ಹಣ್ಣು, ಹೂವು ಹಾಗೂ ಕೊಳೆಯುವ ವಸ್ತುಗಳನ್ನು ಹಸಿ ತ್ಯಾಜ್ಯದ ವಿಭಾಗದಲ್ಲೂ, ಪ್ಲಾಸ್ಟಿಕ್, ಬಟ್ಟೆ, ಕಬ್ಬಿಣ, ರಬ್ಬರ್ ಮತ್ತು ಮರದ ವಸ್ತುಗಳನ್ನು ಒಣ ತ್ಯಾಜ್ಯದ ವಿಭಾಗದಲ್ಲೂ ನೀಡಬೇಕು. ಡೈಪರ್ಸ್, ಸ್ಯಾನಿಟರಿ ನ್ಯಾಪ್‍ಕಿನ್ಸ್‍ಗಳಂತಹ ವಸ್ತುಗಳನ್ನು ಸ್ಯಾನಿಟರಿ ತ್ಯಾಜ್ಯ ಎಂದು ಪ್ರತ್ಯೇಕಿಸಬೇಕು. ಇನ್ನುಳಿದಂತೆ ಪೇಂಟ್ ಡಬ್ಬಗಳು, ಔಷಧ ಬಾಟಲಿಗಳು, ಇ-ವೇಸ್ಟ್, ಬಲ್ಬ್, ಹಳೆಯ ಬ್ಯಾಟರಿಗಳು ಹಾಗೂ ಬಳಸಿದ ಸೂಜಿ, ಸಿರಿಂಜ್ ಮತ್ತು ಬ್ಯಾಂಡೇಜ್‍ಗಳನ್ನು ವಿಶೇಷ ತ್ಯಾಜ್ಯದ ಅಡಿಯಲ್ಲಿ ನೀಡಲು ಸೂಚಿಸಲಾಗಿದೆ.

 

ಸಾರ್ವಜನಿಕರು ಕಸವನ್ನು ಮೂಲದಲ್ಲೇ ವಿಂಗಡಿಸಿ ನೀಡದಿದ್ದರೆ ಕೇವಲ ದಂಡ ವಿಧಿಸುವುದಷ್ಟೇ ಅಲ್ಲದೆ, ಅವರಿಗೆ ನೀಡಲಾಗುತ್ತಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಎಚ್ಚರಿಕೆ ನೀಡಿದೆ.

ಚಿತ್ರದುರ್ಗ ನಗರವನ್ನು ಸ್ವಚ್ಛವಾಗಿಡಲು ಮತ್ತು ಈ ಹೊಸ ಕಸ ನಿರ್ವಹಣಾ ನಿಯಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಗರದ ಎಲ್ಲಾ ನಾಗರಿಕರು ಹಾಗೂ ವರ್ತಕರು ನಗರಸಭೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now