ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ನಾಯಕರ ನಡುವಿನ ಶೀತಲ ಸಮರದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಟ್ವಿಟರ್ (X) ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿರುವ ಅವರು, “ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ದಿನವನ್ನಾದರೂ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ” ಎಂದು ಲೇವಡಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ನಿರಂತರ ಹಗ್ಗಜಗ್ಗಾಟವನ್ನು ಪ್ರಸ್ತಾಪಿಸಿರುವ ಅಶೋಕ್, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಉಚಿತ ಸಲಹೆಯೊಂದನ್ನು ನೀಡಿದ್ದಾರೆ.
ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.
ಇನ್ನು ಎರಡು ವರ್ಷ ನಡೆಯಲಿರುವ @DKShivakumar ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು… pic.twitter.com/iiDwOIzjOG
— R. Ashoka (@RAshokaBJP) June 5, 2026
ಇನ್ನು ಎರಡು ವರ್ಷ ನಡೆಯಲಿರುವ ಡಿ.ಕೆ. ಶಿವಕುಮಾರ್ ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು ಹಾಗೂ ರಣದೀಪ್ ಸಿಂಗ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ಆರ್. ಅಶೋಕ್ ಲೇವಡಿ ಮಾಡಿದ್ದಾರೆ.










