Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯದ ಜನ ಕೈಗೆ ಬಳೆ ತೊಟ್ಟುಕೊಳ್ಳಬೇಡಿ : ಶಿವರಾಮೇಗೌಡ ಹಿಂಗಂದಿದ್ಯಾಕೆ..?

---Advertisement---

ಮಂಡ್ಯ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಮಾಜಿ ಸಂಸದ ಎಸ್ ಆರ್ ಶಿವರಾಮೇಗೌಡ ಜಿಲ್ಲೆಯ ಜನರ ಬಗ್ಗೆಯೇ ಮಾತನಾಡಿದ್ದಾರೆ. ಸದ್ಯ ಬಿಜೆಪಿಯಲ್ಲಿರುವ ಶಿವರಾಮೇಗೌಡ, ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ. ಕುಮಾರಸ್ವಾಮಿ ಅವರನ್ನು ವಿರೋಧಿಸುವ ಬರದಲ್ಲಿ ಮಂಡ್ಯದ ಗಂಡಸರು ಕೈಗೆ ಬಳೆ ತೊಟ್ಟುಕೊಳ್ಳಬಾರದು ಎಂದಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಶಿವರಾಮೇಗೌಡ ಅವರು, ರಾಮನಗರದಿಂದ ಕುಮಾರಸ್ವಾಮಿಯನ್ನು ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ.

ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರನ್ನಾಗಿ ಮಾಡುವ ಅಗತ್ಯವಿಲ್ಲ. ಗಂಡಸರಾಗ್ರಪ್ಪ ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಶಿವರಾಮೇಗೌಡ ಮಾತನಾಡಿದ್ದಾರೆ. ಈ ಮಾತುಗಳಿಗೆ ಈಗ ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಿವರಾಮೇಗೌಡರು ನಾಲಿಗೆ ಹರಿಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಸದ್ಯ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಕಾವು ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಈ ರೀತಿಯ ಮಾತು ಕುಮಾರಸ್ವಾಮಿ ಬಳಗದವರನ್ನು ಮತ್ತಷ್ಟು ಕೋಪಗೊಳ್ಳುವಂತೆ ಮಾಡಿದೆ.

ಸಿಪಿ ಯೋಗೀಶ್ವರದ ತಾನೂ ಜೆಡಿಎಸ್ ಚಿಹ್ನೆ ಹಿಡಿಯಲ್ಲ ಎಂದು ಹೇಳಿ ಕಾಂಗ್ರೆಸ್ ಸೇರಿದ್ದಾರೆ. ಇದರ ನಡುವೆ ಎರಡು ಬಾರಿ ಸೋತರು ಮೂರನೆ ಬಾರಿಯ ಗೆಲುವಿನ ನಿರೀಕ್ಷೆಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಫೈನಲ್ ಮಾಡಿದ್ದಾರೆ. ಸದ್ಯ ನಿನ್ನೆಯಷ್ಟೇ ನಾಮಪತ್ರ ಸಲ್ಲಿಕೆ ಮಾಡಿದ್ದು, ನಿಖಿಲ್ ಕುಮಾರಸ್ವಾಮಿ ಜೊತೆಗೆ ಬಿಜೆಪಿಯ ಘಟಾನುಘಟಿ ನಾಯಕರೇ ನಿಂತಿದ್ದಾರೆ. ಅತ್ತ ಸಿಪಿ ಯೋಗೀಶ್ವರ್ ಗೆಲುವಿಗಾಗಿ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಚುನಾವಣೆಯ ಬಿಸಿಯ ಹೊಗೆ ಆವರಿಸಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment