Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯದ ಜನ ಬಿಜೆಪಿಯವರ ನಯವಂಚಕ ಮಾತುಗಳಿಗೆ ಮರಳಾಗುವುದಿಲ್ಲ : ಸಚಿವ ಆರ್.ಬಿ.ತಿಮ್ಮಾಪುರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.22) : ಕೇಂದ್ರ ಸಚಿವ ಸಂಪುಟದಲ್ಲಿರುವ ಸಚಿವರುಗಳಿಗೆ ಕಿಂಚಿತ್ತು ಕಿಮ್ಮತ್ತು ನೀಡದ ಪ್ರಧಾನಿ ಮೋದಿ ಹಿಟ್ಲರ್‌ ನಂತೆ ಅಧಿಕಾರ ಚಲಾಯಿಸುತ್ತಿದ್ದಾರೆಯೇ ವಿನಃ  ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷ ಎಂದಿಗೂ ಏಕಚಕ್ರಾಧಿಪತಿಯಂತೆ ಅಧಿಕಾರ ಚಲಾಯಿಸುವುದಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಬಿಜೆಪಿ ಯವರ ಟೀಕೆಗಳಿಗೆ ತಿರುಗೇಟು ನೀಡಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಆರು ನೂರು ಯೋಜನೆಗಳನ್ನು ಘೋಷಿಸಿ ಕೇವಲ 50 ಯೋಜನೆಗಳನ್ನು ಜಾರಿಗೆ ತರದ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸುವ ಹಕ್ಕಿಲ್ಲ. ಕೇಂದ್ರದಲ್ಲಿರುವ ಬಹುತೇಕ ಸಚಿವರುಗಳಿಗೆ ಅವರವರ ಖಾತೆಯಲ್ಲಿ ಏನೇನು ಯೋಜನೆಗಳಿವೆ ಎನ್ನುವುದೇ ಗೊತ್ತಿಲ್ಲ.

ಪ್ರಧಾನಿ ಮೋದಿ ಅಷ್ಟರ ಮಟ್ಟಿಗೆ ತಮ್ಮ ಹಿಡಿತ ಸಾಧಿಸುತ್ತಿದ್ದಾರೆ. ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದನ್ನು ನೋಡಿ ಪ್ರಧಾನಿ ಮೋದಿಗೆ ಸಹಿಸಿಕೊಳ್ಳಲು ಆಗದೆ ಅನ್ನಭಾಗ್ಯ ಯೋಜನೆಗೆ ಕರ್ನಾಟಕಕ್ಕೆ ಅಕ್ಕಿ ಕೊಡಬೇಡಿ ಎಂದು ಎಲ್ಲಾ ರಾಜ್ಯಗಳಿಗೂ ತಾಕೀತು ಮಾಡುತ್ತಿದ್ದಾರೆ. ಇದರಿಂದ ಸ್ವಲ್ಪ ತಡವಾಗಬಹುದು. ಆದರೆ ಅನ್ನಭಾಗ್ಯ ಯೋಜನೆ ಮಾತ್ರ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದರು.

ಅಹಿಂದ ನಾಯಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಶೋಭ ಕರಂದ್ಲಾಜೆ ಲಘುವಾಗಿ ಮಾತನಾಡಿರುವುದನ್ನು ಗಮನಿಸಿದರೆ ಅವರ ತಲೆಯಲ್ಲಿ ಬ್ರೈನ್ ಇಲ್ಲ ಎನ್ನುವುದು ಗೊತ್ತಾಗುತ್ತದೆ. ಯಾವ ಹಳ್ಳಿಗೆ ಹೋದರೂ ರಾಜ್ಯಕ್ಕೆ ಅಕ್ಕಿ ಕೊಡಲು ಏಕೆ ಅಡ್ಡಿಪಡಿಸುತ್ತಿದ್ದೀರ ಎಂದು ಜನ ಪ್ರಶ್ನಿಸಿ ಎಲ್ಲಿ ತರಾಟೆ ತೆಗೆದುಕೊಳ್ಳುತ್ತಾರೋ ಎನ್ನುವ ಭಯ ಬಿಜೆಪಿಗೆ ಕಾಡುತ್ತಿರುವುದರಿಂದ ಐದು ಉಚಿತ ಗ್ಯಾರೆಂಟಿಗಳ ಕುರಿತು ಇಲ್ಲ ಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನ ಇನ್ನು ಮಂದೆ ಬಿಜೆಪಿಯವರ ನಯವಂಚಕ ಮಾತುಗಳಿಗೆ ಮರಳಾಗುವವರಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...