Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾದಾಮಿಯಲ್ಲಿ ಓಡಾಟ ಕಷ್ಟ ಎಂದಿದ್ದ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಕೊಡಿಸ್ತೀವಿ ಎಂದ ಜನತೆ..!

Facebook
Twitter
Telegram
WhatsApp

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯ ಇನ್ನು ಕ್ಷೇತ್ರ ಆಯ್ಕೆ ಮಾಡಿಕೊಂಡಿಲ್ಲ. ಇನ್ನು ಗೊಂದಲದಲ್ಲಿಯೇ ಇದ್ದಾರೆ. ಅತ್ತ ಕಡೆ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಸ್ಟ್ರಾಂಗ್ ಕ್ಯಾಂಡಿಡೇಟ್ ಹಾಕುವುದಕ್ಕೆ ಬಿಜೆಪಿ ಕೂಡ ಕಾಯುತ್ತಿದೆ. ಈ ಮಧ್ಯೆ ಟಿಕೆಟ್ ಗಾಗಿ ಅರ್ಜಿ ಹಾಕಿದಾಗಲೇ ಸಿದ್ದರಾಮಯ್ಯ ಅವರು, ನಾನು ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ಯಾಕಂದ್ರೆ ಬಾದಾಮಿ ತುಂಬಾ ದೂರ. ಜನರ ನಡುವೆ ಇರುವುದಕ್ಕೆ ಆಗಲ್ಲ ಅಂತ ಹೇಳಿದ್ದರು.

ಆದರೆ ಸಿದ್ದರಾಮಯ್ಯ ಅವರಿಗೆ ಬಾದಾಮಿಯಿಂದಾನೆ ಸ್ಪರ್ಧಿಸುವಂತೆ ಒತ್ತಾಯ ಜಾಸ್ತಿಯಾಗುತ್ತಿದೆ. 2023ರ ಚುನಾವಣೆಯಲ್ಲಿ ಬಾದಾಮಿಯಿಂದಾನೇ ಸ್ಪರ್ಧೆ ಮಾಡಬೇಕು. ನಾವೆಲ್ಲಾ ಸೇರಿ ಹೆಲಿಕಾಪ್ಟರ್ ಕೊಡಿಸುತ್ತೇವೆ ಎಂದು ಮಚಖಂಡಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಗಟ್ಟಿ ಮನಸ್ಸು ಮಾಡುತ್ತಿಲ್ಲ. ನಾವೂ ಕೇಳಿದಾಗೆಲ್ಲಾ, ಇಲ್ಲ ಇದು ದೂರ ಆಗುತ್ತೆ, ಇಷ್ಟು ದೂರ ಬರೋದಕ್ಕೆ ಆಗಲ್ಲ ಎಂದೇ ಹೇಳುತ್ತಾರೆ. ಇದಕ್ಕಾಗಿ ಬಾದಾಮಿ ಮತದಾರರೆಲ್ಲಾ ಸೇರಿ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಕೊಡಿಸುತ್ತೇವೆ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಸಾವಿರಾರು ಕಾರ್ಯಕರ್ತರು ಬಾದಾಮಿಯಿಂದ ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ ಅವರ ಮನೆ ಮುಂದೆ ಸತ್ಯಾಗ್ರಹ ಮಾಡುತ್ತೇವೆ. ಅವರು ಬಾದಾಮಿ ಕ್ಷೇತ್ರದಿಂದಾನೇ ಸ್ಪರ್ಧೆ ಮಾಡಬೇಕು. ಹೀಗಾಗಿ ಅವರನ್ನು ವಾಪಾಸ್ ಕರೆದುಕೊಂಡು ಬರುತ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!