Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಪರ ಜನರ ತೀರ್ಪು ದೊಡ್ಡ ಸಂಚಲನ : ಜಿ. ಎಸ್. ಮಂಜುನಾಥ್

---Advertisement---

ಚಿತ್ರದುರ್ಗ, (ಮೇ.13) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆ.ಸಿ. ವೀರೇಂದ್ರ ಪಪ್ಪಿ ಅವರ ಗೆಲುವು ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜನರು ನೀಡಿದ ತೀರ್ಪು ದೊಡ್ಡ ಸಂಚಲವನ್ನೇ ಸೃಷ್ಟಿ ಮಾಡಿದೆ. ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದು ಮತ್ತೊಂದು ಕ್ಷೇತ್ರವಾದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಮಾಜಿ ಸಚಿವ ಆಂಜನೇಯ ಅವರ ನಡೆಯಿಂದ  ಕ್ಷೇತ್ರ ಸೋಲಿಗೆ ಕಾರಣವಾಗಿದೆ ಎಂದು ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜಿ. ಎಸ್. ಮಂಜುನಾಥ್ ಹೇಳಿದರು.

ತಾಲ್ಲೂಕಿನ ಭೀಮಸಮುದ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಚಿತ್ರದುರ್ಗ ವಿಧಾನಸಭಾ
ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ
ಗಿರಿ ಎಂ ಜಾನಕಲ್ ಮಾತನಾಡಿ,  ಜಿ.ಎಸ್.ಟಿ.
ನೋಟ್ ಬ್ಯಾನ್ ಜನರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದ ಕಾರಣ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ್ದಾರೆ.
ಜನರಿಗೆ ಬೇಕಾದ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡಲು ವಿಫಲವಾಗಿದೆ. ಆದ ಕಾರಣ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿ ಜನಬಹುಮತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿರುವ ಪ್ರಣಾಳಿಕೆ ಎಲ್ಲವೂ ಕೂಡ ಜಾರಿ ಮಾಡುತ್ತದೆ ಎಂದು ಹೇಳಿದರು.

ಜನರಿಗೆ ಬೇಕಾಗಿರುವುದು ಸಾರಿಗೆ ವ್ಯವಸ್ಥೆ, ಪಡಿತರ ಚೀಟಿ, ರೈತರಿಗೆ ಗಂಗಾ ಕಲ್ಯಾಣ ಯೋಜನೆ, ಮಕ್ಕಳಿಗೆ ಉಚಿತ ಶಿಕ್ಷಣ,  ಏರ್ಪೋರ್ಟ್ ಗಳ ನಿರ್ಮಾಣದಿಂದ ಏನು ಮಾಡಲು ಸಾಧ್ಯ ಎಂದು ತಿಳಿಸಿದರು.
ಹಾಗೆಯೇ ರಾಜ್ಯ ಜನತೆಗೆ ಹಾಗೂ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾಗಿದ್ದಾರೆ ಅವರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...