ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಗುಬ್ಬಿ : ಅಮೃತ ಸರೋವರ ಯೋಜನೆ ಕಾಮಗಾರಿ ಕಳಪೆ ಮಾಡಲಾಗುತ್ತಿದೆ ಎಂದು ಕಿಟ್ಟದಕುಪ್ಪೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಕಿಟ್ಟಿದಕುಪ್ಪೆ ಗ್ರಾಮದಲ್ಲಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಮೃತ ಸರೋವರ ಯೋಜನೆಯಲ್ಲಿ ಕಾಮಗಾರಿ ನಡೆಸುತ್ತಿದ್ದು.ಗುಣಮಟ್ಟದ ಸಾಮಗ್ರಿಗಳನ್ನು ಬಳಸದೆ ಕಳಪೆ ಕಾಮಗಾರಿ ನಡೆಸುತ್ತಿದ್ದು.ಇಂಜಿನಿಯರ್ ಗಳು ಕೇವಲ ಬಿಲ್ ಮಾಡಿಕೊಳ್ಳುವುದಕ್ಕಾಗಿ ಕಾಮಗಾರಿಗಳನ್ನು ಬಳಸುತ್ತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥ ನಟರಾಜು ಗೌಡ ಮಾತನಾಡಿ ಕಿಟ್ಟದ ಕುಪ್ಪೆ ಗ್ರಾಮದ ಕೆರೆ ಕಾಮಗಾರಿ ಪ್ರಾರಂಭದ ಹಂತದಲ್ಲೇ ನೀರು ಜಿನುಗಿ ಕುಸಿದು ಏರಿ ಒಡೆದು ಹೋಗುವ ಅಂಚಿನಲ್ಲಿದೆ.
ಕೆರೆಯ ಏರಿಗೆ ಬಳಪದ ಕಲ್ಲು ಉಪಯೋಗಿಸಿ ಕಳಪೆ ಕಾಮಗಾರಿ ಮಾಡಿದ್ದಾರೆ. ಅಧಿಕಾರಿಗಳು ಇದಕ್ಕೆ ಸಾಮಿಲ್ ಹಾಗಿ ಬಿಲ್ ಪಾಸ್ ಮಾಡಿಸಿಕೊಂಡಿದ್ದಾರೆ. ಈಗ ಕೆರೆ ಏರಿಯ ಕೆಳಬಾಗದಲ್ಲಿ ರಂದ್ರವಾಗಿ ನೀರು ಜಿನುಗುತ್ತಿದ್ದು ಏರಿ ಒಡೆದು ಹೋಗುವ ಅಂಚಿನಲ್ಲಿದೆ ಎಂದು ತಿಳಿಸಿದರು.
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಬಾಲಾಜಿ ಮಾತನಾಡಿ ಕೆರೆಯ ದಡದಲ್ಲಿ ಇದ್ದ ತೂಬು ಕಿತ್ತು ನೀರು ಪೋಲಾಗುತ್ತಿದೆ . ಬೆಳಗಿನ ಜಾವ ಏರಿ ಕುಸಿಯುವ ಮಟ್ಟದಲ್ಲಿತ್ತು. ಅಧಿಕಾರಿಗಳನ್ನು ಸಂಪರ್ಕಿಸಿದರೆ ಫೋನಿಗೆ ಸಿಗುತ್ತಿಲ್ಲ. ಕೆರೆಯ ಆಜು ಬಾಜು ಅಡಿಕೆ ತೋಟಗಳಿದ್ದು ನೀರು ತುಂಬಿಕೊಂಡು ರೈತರು ಸಂಕಷ್ಟಕ್ಕೆ ಸಿಲುಕುವ ಮುನ್ನ ಎಚ್ಚೆತ್ತು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್