Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನ್ಯಾಯ, ಭ್ರಷ್ಟಾಚಾರ, ಲಂಚದ ಹಾವಳಿ ವಿರುದ್ದ ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ರಚಿನೆ : ಪಿ.ಈ.ವೆಂಕಟಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಅನ್ಯಾಯ, ಭ್ರಷ್ಟಾಚಾರ, ಲಂಚದ ಹಾವಳಿ ವಿರುದ್ದ ಹೋರಾಡಲು ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ರಚಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಪಿ.ಈ.ವೆಂಕಟಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ತಿಂಗಳ ಹಿಂದೆ ಸಮಿತಿ ರಚಿಸಿ ನೊಂದಾಯಿಸಲಾಗಿದೆ. ಚಿತ್ರದುರ್ಗದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಅನೇಕ ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ನಗರದಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಸ್ವಚ್ಚತೆ ಮರೀಚಿಕೆಯಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸಗಳಾಗುವುದಿಲ್ಲ. ಚಳ್ಳಕೆರೆ ಗೇಟ್‍ನಲ್ಲಿ ಜನಸಂದಣಿ ಹಾಗೂ ವಾಹನಗಳ ದಟ್ಟಣೆ ಜಾಸ್ತಿಯಾಗುತ್ತಿರುವುದರಿಂದ ಅಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾಗಬೇಕು. ಶನಿಮಹಾತ್ಮ ದೇವಾಲಯದ ರಸ್ತೆ ಅದ್ವಾನವಾಗಿದೆ. ಭದ್ರಾಮೇಲ್ದಂಡೆ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಪಿ.ಈ.ವೆಂಕಟಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.

ಜನಹಿತ ಹಿರಿಯ ನಾಗರೀಕರ ಹೋರಾಟ ಸಮಿತಿ ಕಾರ್ಯದರ್ಶಿ ವೈ.ಕೆ.ಮಹಾಸ್ವಾಮಿ, ನಿರ್ದೇಶಕರುಗಳಾದ ಹೆಚ್.ಕನಕದಾಸ್, ಜಿ.ಟಿ.ಲಕ್ಷ್ಮಿನಾರಾಯಣಸ್ವಾಮಿ, ಹನುಮಂತರೆಡ್ಡಿ, ಈಶ್ವರಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment