Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್ ರಾಜ್‍ಕುಮಾರ್ ಮನೆಗೆ ಭೇಟಿ ನೀಡಲು ಹೊರಟ ವೇಳೆ ನಟ ವಿಜಯ್ ಸೇತುಪತಿ‌ ಮೇಲೆ ಹಲ್ಲೆ..!

Facebook
Twitter
Telegram
WhatsApp

ಬೆಂಗಳೂರು: ತಮಿಳು ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿದ್ದ ನಟ ವಿಜಯ್ ಸೇರುಪತಿ, ವಿಮಾನದಲ್ಲಿ ಬರುವ ವೇಳೆ ಪ್ರಯಾಣಿಕನ ಜೊತೆ ಕಿರಿಕ್ ಮಾಡುಕೊಂಡಿದ್ದರು ಎನ್ನಲಾಗಿದೆ.

ಕಿರಿಕ್ ನಂತರ ಏರ್ಪೋಟ್ ನಿಂದ ಹೊರ ಬರ್ತಿದ್ದ ನಟ ವಿಜಯ್ ಸೇತು ಪತಿ ಮತ್ತು ಅವನ ಪಿಎ ಮೇಲೆ ಹಿಂದಿನಿಂದ ಬಂದು ನಟನ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಹಲ್ಲೆಯ ನಂತರ ನಟ ಮತ್ತು ಪ್ರಯಾಣಿಕ ಏರ್ಪೋಟ್ ಠಾಣೆಗೆ ಹೋಗಿದ್ದರು. ಅಲ್ಲಿ ಕೇಸ್ ಹಾಕದೆ ಅಪಾಲಜಿ ಬರೆಸಿಕೊಂಡು ರಾಜಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತಮಿಳಿನ ರಿಯಾಲಿಟಿ ಶೋ ಶೂಟಿಂಗ್ ಬರ್ತಿದ್ದ ವಿಜಯ್ ಸೇತುಪತಿ ನಿನ್ನೆಯೂ ಬಂದಿದ್ದರು. ಇನೋವೆಟಿವ್ ಫಿಲಂ ಸಿಟಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ವಿಜಯ್ ಸೇತುಪತಿ ಜೊತೆ ಬರ್ತಾ ಇದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿ ಇದ್ದರು ಎನ್ನಲಾಗ್ತಿದೆ. ಈ ವೇಳೆ ವಿಜಯ್ ಸೇತುಪತಿಯ ಪಿಎಗೂ ಸಹ ಪ್ರಯಾಣಿಕನಿಗೂ ಜಗಳ ಆಗಿದೆ. ನಂತರ ಏರ್ಪೋರ್ಟ್ ನಲ್ಲಿ ಇಳಿದು ಬರೋವಾಗ ಹಲ್ಲೆ ನಡೆದಿದೆ.

ಈ ಸಂಬಂಧ ತಮಿಳು ನಟ ವಿಜಯ್ ಸೇತುಪತಿ ಹೇಳಿಕೆ ನೀಡಿದ್ದು, ಪುನೀತ್ ರಾಜ್ ಕುಮಾರ್ ಫ್ಯಾನ್ ನಾನು. ಅವರನ್ನು ಇದುವರೆಗೆ ಭೇಟಿ ಆಗಿಲ್ಲ, ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ಕಾಲ್ ನಲ್ಲಿ‌ ಒಂದು ಸ‌ಲ ಮಾತನಾಡಿದ್ದೆ. ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನೆಮಾ ನೋಡಿ ಕಾಲ್ ಮಾಡಿದ್ರು ನನಗೆ. ಅವರು ಇಲ್ಲ ಎನ್ನುವುದು ಈ ಕ್ಷಣದ ವರೆಗೆ ಅರಗಿಸಿಕೊಳ್ಳಲು ಆಗಿಲ್ಲ ನಂಗೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!