Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೆಟ್ರೋಲ್-ಡಿಸೇಲ್ ದರ ಏರಿಕೆ : ಸೈಕಲ್ ನಲ್ಲಿ ಹೊರಟ ಬಿಜೆಪಿ ನಾಯಕರು..!

---Advertisement---

ಬೆಂಗಳೂರು: ಪೆಟ್ರೋಲ್ – ಡಿಸೇಲ್ ದರ ಏರಿಕೆ ವಿಚಾರಕ್ಕೆ ಬಿಜೆಪಿ ನಾಯಕರು ಇಂದು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಇಳಿಸಿ.. ಇಳಿಸಿ.. ತೈಲ ಬೆಲೆ ಇಳಿಸಿ, ತೊಲಗಿಸಿ.. ತೊಲಗಿಸಿ ರಾಜ್ಯ ಸರ್ಕಾರ ತೊಲಗಿಸಿ.. ಬೇಕೆ ಬೇಕು ನ್ಯಾಯ ಬೇಕು. ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದ್ದಾರೆ.

ಇದೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ‘ಬಿಜೆಪಿ ಹೋರಾಟ ಹತ್ತಿಕ್ಕಲು ಪೋಲಿಸ್ ಬಳಸಿ ಕೊಳ್ಳುತ್ತಿರುವ ರಣಹೇಡಿ ಕಾಂಗ್ರೆಸ್ ಸರ್ಕಾರ. ನಾಡಿನ ಜನರ ಮೇಲೆ ದಿನದಿಂದ ದಿನಕ್ಕೆ ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. @BJP4Karnataka ಹೋರಾಟಕ್ಕೆ ಬೆದರಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜಾಥಾ ಆರಂಭಕ್ಕೂ ಮುನ್ನವೇ ಪೊಲೀಸರ ಮೂಲಕ ಬಂಧಿಸಿದ್ದಾರೆ.

ಅಧಿಕಾರ ಬಲದಿಂದ ನಮ್ಮ ಹೋಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ನಿಮ್ಮ ಸರ್ಕಾರದ ವಿರುದ್ಧ ರಾಜ್ಯದ ಜನಸಾಮಾನ್ಯರ ಸಹನೆಯ ಕಟ್ಟೆಯೊಡೆದು ಅವರು ಬೀದಿಗಿಳಿದು ಹೋರಾಡುವ ದಿನ ದೂರವಿಲ್ಲ. ದಿನಕ್ಕೊಂದು ದರ ಏರಿಕೆಯ ನಿರ್ಧಾರಗಳನ್ನು ಕೈ ಬಿಡುವ ತನಕ ಅಥವಾ ನೀವು ಅಧಿಕಾರ ಬಿಟ್ಟು ತೊಲಗುವ ತನಕ ಬಿಜೆಪಿ ಹೋರಾಟ ಕೊನೆಗಾಣದು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇಂದಿನ ಹೋರಾಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಗಳಾದ ಶ್ರೀ @drashwathcn, ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP, ಪ್ರಕೋಷ್ಠಕಗಳ ರಾಜ್ಯ ಸಂಚಾಲಕರಾದ ಶ್ರೀ ದತ್ತಾತ್ರಿ, ರಾಜ್ಯ ಕಾರ್ಯದರ್ಶಿ ಶ್ರೀ ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರಾದ ಶ್ರೀ ಎಸ್.ಹರೀಶ್, ಶ್ರೀ ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment