Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೆಟ್ರೋಲ್ ಬೆಲೆ ಇಳಿಕೆ ಗ್ರಾಹಕರಿಗೆ ಸಂತಸ.. ಮಾಲೀಕರಿಗೆ ಸಂಕಟ : ಮೇ31ಕ್ಕೆ ಮುಷ್ಕರ..!

Facebook
Twitter
Telegram
WhatsApp

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಮಾಲೀಕರು ಪೆಟ್ರೋಲ್ ಖರೀದಿ ನಿಲ್ಲಿಸಿ ಮೇ 31ಕ್ಕೆ ಪ್ರತಿಭಟನೆ ನಡೆಸಲಿದ್ದಾರೆ.

ಈ ಸಂಬಂಧ ಆಕ್ರೋಶ ಹೊರ ಹಾಕಿರುವ ಪೆಟ್ರೋಲ್ ಬಂಕ್ ಮಾಲೀಕರು, 2017ರಿಂದ ಪೆಟ್ರೋಲ್ ಡಿಸೇಲ್ ಮೇಲೆ 1 ರೂಪಾಯಿ ಕಮಿಷನ್ ನೀಡಬೇಕೆಂದು ಮನವಿ ಮಾಡಲಾಗಿದೆ. ಆದರೆ ಅಂದಿನಿಂದ ಇಂದಿನವರೆಗೂ ಒಕ್ಕೂಟದ ಬೇಡಿಕೆ ಈಡೇರಿಸಿಲ್ಲ. ಅಂದಿನ ಪೆಟ್ರೋಲ್ ಡಿಸೇಲ್ ಬೆಲೆಯನ್ನು ಹೋಲಿಕೆ ಮಾಡಿದರೆ ಇಂದು ದ್ವಿಗುಣವಾಗಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗೂ ಮನವಿ ಮಾಡಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಸರ್ಕಾರ ಒಮ್ಮೆಲೆ 9 ರೂಪಾಯಿ ಕಡಿಮೆ ಮಾಡಿತ್ತು. ನಾವೂ ಹಿಂದಿನ ದಿನ ದಾಸ್ತಾನು ಮಾಡಿದ್ದ ಪೆಟ್ರೋಲ್ ಅನ್ನು ಮರುದಿನ ಕಡಿಮೆ ಬೆಲೆಯಲ್ಲಿಯೇ ಮಾರಬೇಕಾಯಿತು. ಇದರಿಂದ 3 ರಿಂದ 30 ಲಕ್ಷ ನಷ್ಟವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಹಲವು ಬೇಡಿಕೆಗಳನ್ನಿಟ್ಟುಕೊಂಡು ತೈಲ ಖರೀದಿ ನಿಲ್ಲಿಸಿ ನಾಳೆ ಪೆಟ್ರೋಲ್ ಬಂದ್ ಮಾಡಿ,‌ ಮುಷ್ಕರ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!