ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.24 : ಅತ್ಯಂತ ಹಿಂದುಳಿದ ಶೋಚನೀಯ ಸ್ಥಿತಿಯಲ್ಲಿರುವ ಪಿಂಜಾರ ಜನಾಂಗ ವೈಯಕ್ತಿಕ ದ್ವೇಷ, ಅಸೂಯೆಯನ್ನು ಬದಿಗಿಟ್ಟು ಸಂಘಟಿತರಾಗಬೇಕಿದೆ ಎಂದು ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ನಿಕಟಪೂರ್ವ ಅಧ್ಯಕ್ಷ ಹೆಚ್.ಜಲೀಲ್ಸಾಬ್ ಕರೆ ನೀಡಿದರು.
ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಬಲವಾದ ಬೇರೆ ಜಾತಿಗಳು ಸಂಘಟನೆಯ ಮೂಲಕ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ನಮ್ಮಲ್ಲಿರುವ ಸಣ್ಣಪುಟ್ಟ ಲೋಪಗಳಿಗಾಗಿ ಸೌಲತ್ತುಗಳಿಂದ ವಂಚಿತರಾಗುತ್ತಿದ್ದೇವೆ. ಹೊಸ ಪೀಳಿಗೆಯನ್ನು ಮುಂದಕ್ಕೆ ತರುವ ಕೆಲಸವಾಗಬೇಕು. ಇಲ್ಲಿಯವರೆಗೂ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿಯಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲು ಆಗುತ್ತಿಲ್ಲ. ಪಿಂಜಾರ ಎಂಬ ಕಾರಣಕ್ಕಾಗಿ ಸರ್ಕಾರವು ನಮ್ಮನ್ನು ನಿರ್ಲಕ್ಷೆಯಿಂದ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಿಂಜಾರ ಸಂಘಟನೆಯಿದೆ ಎನ್ನುವುದು ಇನ್ನು ಕೆಲವರಿಗೆ ಗೊತ್ತೆ ಇಲ್ಲ. ಸಂಘಟನೆಯಿಂದ ಏನು ಪ್ರಯೋಜನ ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಯಾವುದೇ ಸ್ಥಾನ ಮುಖ್ಯವಲ್ಲ. ಸಮಾಜದ ಹಿತಕ್ಕಾಗಿ ಸ್ವಲ್ಪ ಸಮಯವನ್ನು ಮೀಸಲಿಡೋಣ ಎಂದು ಪಿಂಜಾರ ಜನಾಂಗಕ್ಕೆ ಹೇಳಿದರು.
ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಇಮಾಂಸಾಬ್, ಕಾರ್ಯದರ್ಶಿ ಮಹಮದ್ ಮುಜಾಹಿದ್, ಉಪಾಧ್ಯಕ್ಷೆ ಶಕೀನಾಭಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಸುಬಾನ್ಸಾಬ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಶೇಖ್ಬುಡೇನ್, ಟಿ.ಶಫಿವುಲ್ಲಾ ವೇದಿಕೆಯಲ್ಲಿದ್ದರು.
ಪಿಂಜಾರ ಸಮಾಜದ ಹಾಜಿ ಆರ್.ದಾದಾಪೀರ್ ಇನ್ನು ಅನೇಕರು ಪದಗ್ರಹಣ ಸಮಾರಂಭದಲ್ಲಿ ಹಾಜರಿದ್ದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…