Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

28 ಕ್ಷೇತ್ರದಲ್ಲೂ ಸಚಿವರನ್ನೇ ನಿಲ್ಲಿಸುವ ಪ್ಯ್ಲಾನ್ ಕಾಂಗ್ರೆಸ್ ನದ್ದು : ರೇಣುಕಾಚಾರ್ಯ ಕಿಡಿ

Facebook
Twitter
Telegram
WhatsApp

ದಾವಣಗೆರೆ: ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಬೇಕೆಂಬ ಅಂದಾಜಿನ ಲೆಕ್ಕಚಾರವೂ ಮೂರು ಪಕ್ಷಗಳಲ್ಲೂ ನಡೆದಿದೆ. ಆದರೆ ಯಾವುದನ್ನು ಅಧಿಕೃತವಾಗಿ ಹೊರಗೆ ಹಾಕಿಲ್ಲ. ಇದೀಗ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ವಿಚಾರಕ್ಕೆ ಎಂ ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲಿ ನಿಲ್ಲುವುದಕ್ಕೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಸಚಿವರನ್ನೇ ನಿಲ್ಲಿಸುವ ಪ್ಲ್ಯಾನ್ ಮಾಡಿದೆ ಕಾಂಗ್ರೆಸ್. ಕಾಂಗ್ರೆಸ್ ನವರು ನೀಡಿದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್ ಆಗಿವೆ. ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಒಂಭತ್ತು ತಿಂಗಳಾದರೂ ಕಾಂಗ್ರೆಸ್ ಇನ್ನು ಟೇಕಾಫ್ ಆಗಿಲ್ಲ. ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಬರ ಪರಿಹಾರ ನೀಡುವಲ್ಲೂ ಸರ್ಕಾರ ವಿಫಲವಾಗಿದೆ. ಪ್ರತಿಭಟನೆಗಳನ್ನು ಮಾಡಿ ಅವರ ದುರಾಡಳಿತವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ.

ಹಿಂದೆ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದರು. ಅದೇ ಕೆಂಪಣ್ಣ ಕಾಂಗ್ರೆಸ್ ವಿರುದ್ಧ ಕಮಿಷನ್​ ಆರೋಪ ಮಾಡಿದ್ದಾರೆ. ಈಗ ಆರೋಪ ಬಂದಿದೆಯಲ್ಲ, ಹೊಣೆ ಹೊತ್ತು ರಾಜೀನಾಮೆ ನೀಡಿ. ಗುತ್ತಿಗೆದಾರರು ಆರೋಪ ಮಾಡಿದ್ರೂ ಸ್ಪಷ್ಟವಾದ ಉತ್ತರ‌ ನೀಡುತ್ತಿಲ್ಲ. ಕಾಂಗ್ರೆಸ್ ವೈಫಲ್ಯ ಮುಚ್ಚಿ ಹಾಕಲು ಈ ರೀತಿ ಮಾತನಾಡುತ್ತಿದ್ದಾರೆ. ದೇಶ ವಿಭಜನೆ ಮಾತಾಡಿದರೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಅಂತಾ ಮಾತ್ರ. ಈಶ್ವರಪ್ಪ ಹಿಂದುತ್ವವಾದಿ, ಅದ್ದರಿಂದ ಇರೋದನ್ನೇ ಹೇಳಿದ್ದಾರೆ. ದೇಶ ವಿಭಜನೆ ಮಾಡಬೇಕು ಅಂದರೆ ಯಾರು ಸುಮ್ಮನೆ ಇರುತ್ತಾರೆ ಎಂದು ಈಶ್ವರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!