Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ : ಭಾರತಿ ಬಣಕಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ,
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯ ಕರ್ನಾಟಕ ಜನಪರ ವೇದಿಕೆಯ ನಾಲ್ಕನೆ ವಾರ್ಷಿಕೋತ್ಸವದ ಅಂಗವಾಗಿ ಸ್ಟೇಡಿಯಂ ಸಮೀಪವಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಶುಕ್ರವಾರ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಗಿಡ ನೆಟ್ಟು ಮಾತನಾಡುತ್ತ ಪರಿಸರ ಸದಾ ಹಸಿರಿನಿಂದ ಕೂಡಿರಬೇಕಾದರೆ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿದಾಗ ಸಕಲ ಜೀವರಾಶಿಗಳಿಗೂ ಶುದ್ದವಾದ ಗಾಳಿ ದೊರಕುತ್ತದೆ. ಗಿಡ-ಮರಗಳನ್ನು ನಾಶಪಡಿಸುವ ಬದಲು ಹೆಚ್ಚು ಹೆಚ್ಚು ಗಿಡಗಳನ್ನು ನೆಡಬೇಕೆಂದು ಹೇಳಿದರು.

ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ.ರಾಜೇಂದ್ರ ಮಾತನಾಡಿ ಮನೆಗೊಂದು ಮರ ಊರಿಗೊಂದು ಕೆರೆ, ವೇದಿಕೆಯ ನಡೆ ನಿಸರ್ಗದ ಕಡೆ ಎನ್ನುವ ಚಿಂತನೆಯಿಟ್ಟುಕೊಂಡು ಪ್ರತಿ ವರ್ಷವೂ ಸರ್ಕಾರಿ ಕಚೇರಿ, ಶಾಲಾ ಆವರಣ, ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಜನತೆಯಲ್ಲಿ ಪರಿಸರ ಸಂರಕ್ಷಿಸುವ ಜಾಗೃತಿ ಮೂಡಿಸುತ್ತಿದ್ದೇವೆಂದು ತಿಳಿಸಿದರು.

ಜಯ ಕರ್ನಾಟಕ ಜನಪರ ವೇದಿಕೆ ಪ್ರಧಾನ ಕಾರ್ಯದರ್ಶಿ ಅಭಿಲಾಶ್, ಬಾಬು, ಗಿರೀಶ್, ತಾಲ್ಲೂಕು ಅಧ್ಯಕ್ಷ ಅಶೋಕ್, ಕಾರ್ಯಾಧ್ಯಕ್ಷ ನಿರಂಜನ್, ಪದಾಧಿಕಾರಿಗಳಾದ ಸತೀಶ್, ಶಿವು, ಮಾರುತಿ, ಸಂದೀಪ್, ರಂಗನಾಥ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...