Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಯವಿಟ್ಟು ಭಾರತ – ಆಸ್ಟ್ರೇಲಿಯಾ ಫೈನಲ್ ಪಂದ್ಯ ನೋಡಬೇಡಿ | ಅಮಿತಾಭ್ ಬಚ್ಚನ್ ಗೆ ಕ್ರಿಕೆಟ್ ಪ್ರೇಮಿಗಳ ಮನವಿ

---Advertisement---

ಸುದ್ದಿಒನ್ : ಕ್ರಿಕೆಟ್ ಪ್ರೇಮಿಗಳು ತೀವ್ರ ಕಾತರದಿಂದ ಕಾಯುತ್ತಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ(ನವೆಂಬರ್ 19) ಭಾರತ – ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ನ ಅಂತಿಮ ಪಂದ್ಯವನ್ನು ಆಡಲಿವೆ. ಈ ಪಂದ್ಯಕ್ಕೆ ಅತಿರಥ ಮಹಾರಥರು ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಉಪಸ್ಥಿತರಿರುವರು.

ಆದರೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರವರನ್ನು ಇಂತಹ ಮಹತ್ವದ ಪಂದ್ಯಕ್ಕೆ ಹೋಗಬೇಡಿ ಎಂದು ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ. ವಿಶ್ವಕಪ್ ಫೈನಲ್‌ಗೆ ಹೋಗಬೇಡಿ ಎಂದು  ಟ್ವಿಟ್ಟರ್ ಮೂಲಕ ಕಾಮೆಂಟ್‌ಗಳು ಹಾಕುತ್ತಿರುವುದು ಇದೀಗ ವೈರಲ್ ಆಗಿವೆ.

ಅಭಿಮಾನಿಗಳು ಹೀಗೆ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಬರಬೇಡಿ ಎನ್ನಲು ಕಾರಣವೇನೆಂದರೆ, ವಾಂಖೆಡೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿತು. 70 ರನ್‌ಗಳಿಂದ ಗೆದ್ದು ಫೈನಲ್‌ಗೆ ತಲುಪಿತ್ತು. ಈ ಪಂದ್ಯದ ಕುರಿತು ಟೀಂ ಇಂಡಿಯಾ ಗೆಲುವಿನ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಗ್ ಬಿ, ನಾನು ನೋಡದಿದ್ದರೆ ಮ್ಯಾಚ್ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ನಾನು ಪಂದ್ಯವನ್ನು ನೋಡದಿದ್ದರೆ ಭಾರತ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಸೆಂಟಿಮೆಂಟ್ಸ್ ಅನ್ನು ಹೆಚ್ಚು ಫಾಲೋ ಮಾಡುವ ಕ್ರಿಕೆಟ್ ಅಭಿಮಾನಿಗಳು ಇದೀಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನೀವು ಪಂದ್ಯವನ್ನು ನೋಡದಿರುವ ಕಾರಣ ಟೀಂ ಇಂಡಿಯಾ ಸೆಮಿಸ್ ತಲುಪಿತ್ತು, ಆದ್ದರಿಂದ ಫೈನಲ್ ಪಂದ್ಯವನ್ನು ನೀವು ನೋಡದೆ ಹೋದರೆ ಕಪ್ ಕೂಡ ನಮ್ಮದೇ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಬಿಗ್ ಬಿ ಟ್ವೀಟ್ ಗೆ ಪ್ರತ್ಯುತ್ತರವಾಗಿ ಈ ಬಾರಿ ತ್ಯಾಗ ಮಾಡಿ ಸಾರ್ ಎಂದು ಕಾಮೆಂಟ್ ಗಳ ಮಹಾಪೂರವೇ ಹರಿದು ಬರುತ್ತಿದೆ ಎಂದು ಒಬ್ಬರು ಫೈನಲ್ ಪಂದ್ಯಕ್ಕೆ ಬರಬೇಡಿ ಎಂದು ಕೇಳಿದರೆ, ಮತ್ತೊಬ್ಬರು ಮನೆಯಲ್ಲಿ ಟಿವಿ ನೋಡಬೇಡಿ ಎಂದು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿ ಫೈನಲ್ ಪಂದ್ಯದ ದಿನ ನಿಮ್ಮ ಮನೆಯ ಗೇಟ್‌ಗೆ ಬೀಗ ಹಾಕುತ್ತೀನಿ ಎಂದು  ಸಿಹಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಕಾಮೆಂಟ್ ಗಳನ್ನು ನೋಡಿದ ಬಿಗ್ ಬಿ ಇಷ್ಟೆಲ್ಲಾ ನೋಡಿ ಮ್ಯಾಚ್ ಗೆ ಬರಬೇಕಾ ? ಬೇಡವೇ ಎಂದು ಯೋಚಿಸುತ್ತಿದ್ದೇನೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ಹಾಗೆ ಮಾಡಬೇಡಿ ಸಾರ್ ಎಂದು ಟೀಂ ಇಂಡಿಯಾ ಅಭಿಮಾನಿಗಳು ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಅಮಿತಾಭ್ ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಹೋಗುತ್ತಾರಾ ಅಥವಾ ಅಭಿಮಾನಿಗಳ ಹಾರೈಕೆಯನ್ನು ಗಂಭೀರವಾಗಿ ಪರಿಗಣಿಸಿ ಮನೆಯಲ್ಲೇ ಇರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೆ ಈಗಾಗಲೇ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ.‌ ಅಲ್ಲದೆ ಸಮಾರೋಪ ಸಮಾರಂಭವನ್ನು ಬಿಸಿಸಿಐ ಅದ್ಧೂರಿಯಾಗಿ ಆಯೋಜಿಸಲಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment