Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಯವಿಟ್ಟು ಭಾರತ – ಆಸ್ಟ್ರೇಲಿಯಾ ಫೈನಲ್ ಪಂದ್ಯ ನೋಡಬೇಡಿ | ಅಮಿತಾಭ್ ಬಚ್ಚನ್ ಗೆ ಕ್ರಿಕೆಟ್ ಪ್ರೇಮಿಗಳ ಮನವಿ

Facebook
Twitter
Telegram
WhatsApp

ಸುದ್ದಿಒನ್ : ಕ್ರಿಕೆಟ್ ಪ್ರೇಮಿಗಳು ತೀವ್ರ ಕಾತರದಿಂದ ಕಾಯುತ್ತಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ(ನವೆಂಬರ್ 19) ಭಾರತ – ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ನ ಅಂತಿಮ ಪಂದ್ಯವನ್ನು ಆಡಲಿವೆ. ಈ ಪಂದ್ಯಕ್ಕೆ ಅತಿರಥ ಮಹಾರಥರು ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಉಪಸ್ಥಿತರಿರುವರು.

ಆದರೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರವರನ್ನು ಇಂತಹ ಮಹತ್ವದ ಪಂದ್ಯಕ್ಕೆ ಹೋಗಬೇಡಿ ಎಂದು ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ. ವಿಶ್ವಕಪ್ ಫೈನಲ್‌ಗೆ ಹೋಗಬೇಡಿ ಎಂದು  ಟ್ವಿಟ್ಟರ್ ಮೂಲಕ ಕಾಮೆಂಟ್‌ಗಳು ಹಾಕುತ್ತಿರುವುದು ಇದೀಗ ವೈರಲ್ ಆಗಿವೆ.

ಅಭಿಮಾನಿಗಳು ಹೀಗೆ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಬರಬೇಡಿ ಎನ್ನಲು ಕಾರಣವೇನೆಂದರೆ, ವಾಂಖೆಡೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿತು. 70 ರನ್‌ಗಳಿಂದ ಗೆದ್ದು ಫೈನಲ್‌ಗೆ ತಲುಪಿತ್ತು. ಈ ಪಂದ್ಯದ ಕುರಿತು ಟೀಂ ಇಂಡಿಯಾ ಗೆಲುವಿನ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಗ್ ಬಿ, ನಾನು ನೋಡದಿದ್ದರೆ ಮ್ಯಾಚ್ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ನಾನು ಪಂದ್ಯವನ್ನು ನೋಡದಿದ್ದರೆ ಭಾರತ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಸೆಂಟಿಮೆಂಟ್ಸ್ ಅನ್ನು ಹೆಚ್ಚು ಫಾಲೋ ಮಾಡುವ ಕ್ರಿಕೆಟ್ ಅಭಿಮಾನಿಗಳು ಇದೀಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನೀವು ಪಂದ್ಯವನ್ನು ನೋಡದಿರುವ ಕಾರಣ ಟೀಂ ಇಂಡಿಯಾ ಸೆಮಿಸ್ ತಲುಪಿತ್ತು, ಆದ್ದರಿಂದ ಫೈನಲ್ ಪಂದ್ಯವನ್ನು ನೀವು ನೋಡದೆ ಹೋದರೆ ಕಪ್ ಕೂಡ ನಮ್ಮದೇ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಬಿಗ್ ಬಿ ಟ್ವೀಟ್ ಗೆ ಪ್ರತ್ಯುತ್ತರವಾಗಿ ಈ ಬಾರಿ ತ್ಯಾಗ ಮಾಡಿ ಸಾರ್ ಎಂದು ಕಾಮೆಂಟ್ ಗಳ ಮಹಾಪೂರವೇ ಹರಿದು ಬರುತ್ತಿದೆ ಎಂದು ಒಬ್ಬರು ಫೈನಲ್ ಪಂದ್ಯಕ್ಕೆ ಬರಬೇಡಿ ಎಂದು ಕೇಳಿದರೆ, ಮತ್ತೊಬ್ಬರು ಮನೆಯಲ್ಲಿ ಟಿವಿ ನೋಡಬೇಡಿ ಎಂದು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿ ಫೈನಲ್ ಪಂದ್ಯದ ದಿನ ನಿಮ್ಮ ಮನೆಯ ಗೇಟ್‌ಗೆ ಬೀಗ ಹಾಕುತ್ತೀನಿ ಎಂದು  ಸಿಹಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಕಾಮೆಂಟ್ ಗಳನ್ನು ನೋಡಿದ ಬಿಗ್ ಬಿ ಇಷ್ಟೆಲ್ಲಾ ನೋಡಿ ಮ್ಯಾಚ್ ಗೆ ಬರಬೇಕಾ ? ಬೇಡವೇ ಎಂದು ಯೋಚಿಸುತ್ತಿದ್ದೇನೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ಹಾಗೆ ಮಾಡಬೇಡಿ ಸಾರ್ ಎಂದು ಟೀಂ ಇಂಡಿಯಾ ಅಭಿಮಾನಿಗಳು ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಅಮಿತಾಭ್ ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಹೋಗುತ್ತಾರಾ ಅಥವಾ ಅಭಿಮಾನಿಗಳ ಹಾರೈಕೆಯನ್ನು ಗಂಭೀರವಾಗಿ ಪರಿಗಣಿಸಿ ಮನೆಯಲ್ಲೇ ಇರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೆ ಈಗಾಗಲೇ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ.‌ ಅಲ್ಲದೆ ಸಮಾರೋಪ ಸಮಾರಂಭವನ್ನು ಬಿಸಿಸಿಐ ಅದ್ಧೂರಿಯಾಗಿ ಆಯೋಜಿಸಲಿದೆ ಎಂದು ತಿಳಿದುಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!