ರೈತರ ಖಾತೆಗೆ ನೇರವಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆಯಾಗಲಿದೆ. 14ನೇ ಕಂತಿನ ಹಣವನ್ನು ಬಿಡುಗಡೆಯಾಗಬೇಕಿದೆ. ಆ ಹಣ ನಾಳೆ ಅಂದ್ರೆ ಜುಲೈ 27ಕ್ಕೆ ರಿಲೀಸ್ ಆಗಲಿದೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ.
ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಹಣ ನೇರವಾಗಿ ವರ್ಗಾವಣೆಯಾಗಲಿದೆ. ರೈತರಿಗೆ ವರ್ಷಕ್ಕೆ 6 ಸಾವಿರ ಹಣ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಲ್ಲಿ ಒಂದೇ ಸಲ ಕೊಡುವ ಬದಲು, ತಿಂಗಳಿಗೆ 2 ಸಾವಿರ ಕೊಡುತ್ತೇವೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ 13 ಕಂತು ಹಣ ನೀಡಲಾಗಿದೆ. ಈಗ 14ನೇ ಕಂತಿನ ಹಣವನ್ನು ನೇರವಾಗಿ ನಾಳರ ರೈತರ ಅಕೌಂಟ್ ಗೆ ಹಾಕಲಾಗುತ್ತದೆ.
ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











