Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿ : ಇದರ ವಿಶೇಷತೆ ಏನು ಗೊತ್ತಾ..?

Facebook
Twitter
Telegram
WhatsApp

 

 

ಪ್ರಧಾನಿ ಮೋದಿ ಇತ್ತಿಚೆಗಷ್ಟೇ ಅಮೆರಿಕಾದ ಪ್ರವಾಸ ಕೈಗೊಂಡು ಅಲ್ಲಿ, ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿ ಬಂದಿದ್ದಾರೆ. ಈ ಬೆನ್ನಲ್ಲೇ ಈಜಿಪ್ಟ್ ಗೆ ಕೂಡ ಭೇಟಿ ನೀಡಿದ್ದಾರೆ. 1997ರ ನಂತರ ಭಾರತದ ಪ್ರಧಾನಿ ಈಜಿಪ್ಟ್ ಗೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ.

ಇನ್ನು ಉಭಯ ನಾಯಕರು ನಡೆಸುವ ಮಾತುಕತೆಗೂ ಮುನ್ನವೇ ಪ್ರಧಾನಿ ಮೋದಿ ಅವರಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈಜಿಪ್ಟ್ ಅಧ್ಯಕ್ಷರು, ಪ್ರಧಾನಿ ಮೋದಿ ಅವರಿಗೆ ಆರ್ಡರ್ ಆಫ್ ನೈಲ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಈಜಿಪ್ಟ್ ದೇಶದ ಅತ್ಯುನ್ನತ ಪ್ರಶಸ್ತಿ. ನಮ್ಮ ದೇಶದಲ್ಲಿ ನೀಡುವ ಭಾರತ ರತ್ನಕ್ಕೆ ಹೋಲಿಸಬಹುದು. ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿಯು ಶುದ್ಧ ಚಿನ್ನದ ಕಾಲರ್ ರೂಪದಲ್ಲಿದೆ. ಮೂರು ಚೌಕಗಳನ್ನು ಹೊಂದಿರುವ ಶುದ್ಧ ಚಿನ್ನದ ಕಾಲರ್ ಇದಾಗಿದೆ. ‘ಆರ್ಡರ್ ಆಫ್ ದಿ ನೈಲ್’ ಕಾಲರ್ ಮೇಲೆ ಫರೋನಿಕ್ ಚಿಹ್ನೆಗಳಿವೆ. ಮೊದಲ ಚೌಕವು ದುಷ್ಟರ ವಿರುದ್ಧ ರಾಜ್ಯವನ್ನು ರಕ್ಷಿಸುವ ಕಲ್ಪನೆಯನ್ನು ಹೋಲುತ್ತದೆ. ಎರಡನೆಯದು ನೈಲ್ ನದಿಯಿಂದ ತಂದ ಸಮೃದ್ಧಿ ಮತ್ತು ಸಂತೋಷವನ್ನು ಹೋಲುತ್ತದೆ. ಮೂರನೆಯದು ಸಂಪತ್ತು ಮತ್ತು ಸಹಿಷ್ಣುತೆಯನ್ನು ಸೂಚಿಸುತ್ತದೆ. ವಜ್ರ ವೈಡೂರ್ಯದಿಂದ ಅಲಂಕಾರಗೊಂಡಿರುತ್ತದೆ.

ಇನ್ನು ಪ್ರಧಾನಿ ಮೋದಿಯವರಿಗೆ ಹಲವು ಅತ್ಯುನ್ನತ ಪ್ರಶಸ್ತಿಗಳು ಸಿಕ್ಕಿವೆ. ವಿಶ್ವದ ಹಲವು ದೇಶಗಳಲ್ಲಿ ಅತ್ಯುನ್ನತ ಗೌರವ ಸ್ವೀಕರಿಸಿರುವ ನರೇಂದ್ರ ಮೋದಿ ಅವರ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!