Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಭೇಟಿ ವೇಳೆ ಡಿಕೆಶಿ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ : ಕಾರಣವೇನು ಗೊತ್ತಾ..?

---Advertisement---

ನವದೆಹಲಿ: ಬರ ಪರಿಹಾರದ ಹಣಕ್ಕಾಗಿ ಇಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿಯವರು ಡಿಕೆ ಶಿವಕುಮಾರ್ ಅವರ ಹೆಸರನ್ನು ಸಹ ಪ್ರಸ್ತಾಪಿಸಿದ್ದಾರಂತೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಜೊತೆಗೆ ಚರ್ಚೆ ನಡೆಸಿ, ರಾಜ್ಯಕ್ಕೆ ನೀಡಬೇಕಾದ ಪರಿಹಾರ ಹಣಕ್ಕೆ ಮನವಿ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಪ್ರೈಮ್ ಮಿನಿಸ್ಟರ್ ನಿನ್ನ ಹೆಸರನ್ನು ಪ್ರಸ್ತಾಪ ಮಾಡಿದ್ದಾರಯ್ಯ ಎಂದೇ ಹೇಳಿದ್ದಾರೆ. ಇದಕ್ಕೆ ಪಕ್ಕದಲ್ಲಿಯೇ ಇದ್ದ ಡಿಕೆ ಶಿವಕುಮಾರ್ ಅವರು, ಏನಂತ ಕೇಳಿದರು ಎಂದು ಪ್ರಶ್ನೆ ಕೂಡ ಮಾಡಿದ್ದಾರೆ.

ಇದಕ್ಕೆ ನಗುತ್ತಲೇ ಉತ್ತರ ನೀಡಿದ ಸಿದ್ದರಾಮಯ್ಯ ಅವರು, ಡಿಕೆ ಶಿವಕುಮಾರ್ ಅವರು ಕೂಡ ನುಮ್ಮನ್ನು ಭೇಟಿಯಾಗುವುದಕ್ಕೆ ಸಮಯ ಕೇಳಿದ್ದಾರೆ. ಅದಕ್ಕೆ ನಾನು ಕೊಡಿ ಎಂದು ಹೇಳಿದ್ದೇನೆ. ಅವರು ದೆಹಲಿಯಲ್ಲಿಯೇ ಇದ್ದಾರೆ ಎಂದು ಹೇಳೀದ್ದೇನೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಅವರು, ಪ್ರಧಾನಿ ಮೋದಿಯವರು ಅಧಿಕಾರಿಗಳಿಂದ ರಿಪೋರ್ಟ್ ತರಿಸಿಕೊಳ್ಳುತ್ತಿದ್ದಾರಂತೆ. ಆಮೇಲೆ ಭೇಟಿಯಾಗಲು ಸಮಯ ಕೊಡಬಹುದು ಎಂದು ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ದೆಹಲಿ ಪ್ರವಾಸದಲ್ಲಿ ಇದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವುದಕ್ಕೆ ಸಮಯ ಕೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಈ ವಿಚಾರ ಪ್ರಸ್ತಾಪವಾಗಿದೆ. ದೆಹಲಿ ಪ್ರವಾಸ ಮುಗಿಸಿ ಬರುವುದರೊಳಗೆ ಡಿಕೆ ಶಿವಕುಮಾರ್ ಅವರಿಗೂ ಪ್ರಧಾನಿ ಭೇಟಿಗೆ ಅವಕಾಶ ಸಿಕ್ಕರು ಸಿಗಬಹುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment