Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಭೇಟಿ ವೇಳೆ ಡಿಕೆಶಿ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋಧಿ : ಕಾರಣವೇನು ಗೊತ್ತಾ..?

Facebook
Twitter
Telegram
WhatsApp

ನವದೆಹಲಿ: ಬರ ಪರಿಹಾರದ ಹಣಕ್ಕಾಗಿ ಇಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿಯವರು ಡಿಕೆ ಶಿವಕುಮಾರ್ ಅವರ ಹೆಸರನ್ನು ಸಹ ಪ್ರಸ್ತಾಪಿಸಿದ್ದಾರಂತೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಜೊತೆಗೆ ಚರ್ಚೆ ನಡೆಸಿ, ರಾಜ್ಯಕ್ಕೆ ನೀಡಬೇಕಾದ ಪರಿಹಾರ ಹಣಕ್ಕೆ ಮನವಿ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಪ್ರೈಮ್ ಮಿನಿಸ್ಟರ್ ನಿನ್ನ ಹೆಸರನ್ನು ಪ್ರಸ್ತಾಪ ಮಾಡಿದ್ದಾರಯ್ಯ ಎಂದೇ ಹೇಳಿದ್ದಾರೆ. ಇದಕ್ಕೆ ಪಕ್ಕದಲ್ಲಿಯೇ ಇದ್ದ ಡಿಕೆ ಶಿವಕುಮಾರ್ ಅವರು, ಏನಂತ ಕೇಳಿದರು ಎಂದು ಪ್ರಶ್ನೆ ಕೂಡ ಮಾಡಿದ್ದಾರೆ.

ಇದಕ್ಕೆ ನಗುತ್ತಲೇ ಉತ್ತರ ನೀಡಿದ ಸಿದ್ದರಾಮಯ್ಯ ಅವರು, ಡಿಕೆ ಶಿವಕುಮಾರ್ ಅವರು ಕೂಡ ನುಮ್ಮನ್ನು ಭೇಟಿಯಾಗುವುದಕ್ಕೆ ಸಮಯ ಕೇಳಿದ್ದಾರೆ. ಅದಕ್ಕೆ ನಾನು ಕೊಡಿ ಎಂದು ಹೇಳಿದ್ದೇನೆ. ಅವರು ದೆಹಲಿಯಲ್ಲಿಯೇ ಇದ್ದಾರೆ ಎಂದು ಹೇಳೀದ್ದೇನೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಅವರು, ಪ್ರಧಾನಿ ಮೋದಿಯವರು ಅಧಿಕಾರಿಗಳಿಂದ ರಿಪೋರ್ಟ್ ತರಿಸಿಕೊಳ್ಳುತ್ತಿದ್ದಾರಂತೆ. ಆಮೇಲೆ ಭೇಟಿಯಾಘಲು ಸಮಯ ಕೊಡಬಹುದು ಎಂದು ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ದೆಹಲಿ ಪ್ರವಾಸದಲ್ಲಿ ಇದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವುದಕ್ಕೆ ಸಮಯ ಕೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಈ ವಿಚಾರ ಪ್ರಸ್ತಾಪವಾಗಿದೆ. ದೆಹಲಿ ಪ್ರವಾಸ ಮುಗಿಸಿ ಬರುವುದರೊಳಗೆ ಡಿಕೆ ಶಿವಕುಮಾರ್ ಅವರಿಗೂ ಪ್ರಧಾನಿ ಭೇಟಿಗೆ ಅವಕಾಶ ಸಿಕ್ಕರು ಸಿಗಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!