ಶಿವಮೊಗ್ಗಕ್ಕೆ ಭೇಟಿ‌ ಕೊಡಲಿರುವ ಪ್ರಧಾನಿ ಮೋದಿ ಅವರು ಫುಲ್ ಬ್ಯುಸಿ

suddionenews
1 Min Read

 

 

ಶಿವಮೊಗ್ಗ: ಇಂದು ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಕರ್ನಾಟಕದ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ, ಹೈಕಮಾಂಡ್ ನಾಯಕರಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಚುನಾವಣೆ ಹತ್ತಿರವಿರುವ ಹಿನ್ನೆಲೆ ಪ್ರದಾನಿ‌ ಮೋದಿ ಬ್ಯಾಕ್ ಟು ಬ್ಯಾಕ್ ರಾಜ್ಯಕ್ಕೆ ಭೇಟಿ‌ ನೀಡುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಇಂದು ಬೆಳಗಾವಿ ಮತ್ತು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬ ಕೂಡ ಇರುವ ಹಿನ್ನೆಲೆ ಅವರನ್ನು ಗೆ ನೇರವಾಗಿಯೇ ಶುಭ ಹಾರೈಸಲಿದ್ದು, ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅದರ ಜೊತೆಗೆ ಇನ್ನು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

* ಶಿಕಾರಿಪುರ – ರಾಣೆಬೆನ್ನೂರು ರೈಲ್ವೇ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ.

* ರಾಷ್ಟ್ರೀಯ ಹೆದ್ದಾರಿ ಶಿಕಾರಿಪುರ ನಗರಕ್ಕೆ ಹೊಸ ಬೈಪಾಸ್ ರಸ್ತೆಗೆ ಚಾಲನೆ.

* ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಸೇತುವೆ ನಿರ್ಮಾಣದ ಕಾಮಗಾರಿಗೆ ಚಾಲನೆ.

* 127 ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ

* ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಚಾಲನೆ ಸಿಗಲಿದೆ.

Share This Article
Leave a Comment

Leave a Reply

Your email address will not be published. Required fields are marked *