ಪ್ರಧಾನಿ ಭೇಟಿ ಹಿನ್ನೆಲೆ : ಸ್ಥಳ ಪರಿಶೀಲಿಸಿದ ಗೃಹ ಸಚಿವ

suddionenews
1 Min Read

 

ಬೆಂಗಳೂರು: ಇದೇ ತಿಂಗಳ 20 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ರಾಜ್ಯದ ಬಿಜೆಪಿ ನಾಯಕರು ಎಲ್ಲಾ ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಪ್ರಧಾನಿ ಬಂದಾಗ ನಡೆಯುವ ಸಭೆಗೂ ತಯಾರಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈಗಾಗಲೇ ಈ ಸಂಬಂಧ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.

ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮ ಸ್ಥಳಗಳಲ್ಲಿ ತೆಗೆದುಕೊಳ್ಳಲಾದ ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಜೊತೆಗೆ ಡಿಜಿಐಜಿಪಿ, ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ, ಹಿರಿಯ ಪೋಲೀಸ್ ಅಧಿಕಾರಿಗಳು ಸಹ ಉಪಸ್ಥಿತತೆ ಇದ್ದು, ಎಲ್ಲವನ್ನು ಪರಿಶೀಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *