Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆದಿ ಚುಂಚನಗಿರಿ‌ ಮಠಕ್ಕೆ ನಾಳೆ ಬರಲಿದ್ದಾರೆ ಪಿಎಂ ನರೇಂದ್ರ ಮೋದಿ

---Advertisement---

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿಯಲ್ಲಿ ನಿರ್ಮಿಸಲಾಗಿರುವ ಬಾಲಗಂಗಾಧರನಾಥ ಶ್ರೀಗಳ ಗುರು ಭೈರವೈಕ್ಯ ಮಂದಿರ, ಲೋಕಾರ್ಪಣೆಗೆ ಸಜ್ಜಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಗಳೇ ಜಿಲ್ಲೆಗೆ ಬರ್ತಾ ಇದ್ದಾರೆ. ನಾಳೆ ಮಠಕ್ಕೆ ಪಿಎಂ ಮೋದಿ ಅವರು ಬರ್ತಿದ್ದಾರೆ. ಸಿದ್ಧತೆಗಳು ಕೂಡ ಜೋರಾಗಿ ನಡೆದಿವೆ.

80 ಕೋಟಿಗೂ ಅಧಿಕ ವೆಚ್ಚದಲ್ಲಿ ಭೈರವೈಕ್ಯ ಮಂಟಪವನ್ನ ಕಟ್ಟಲಾಗಿದೆ. ಇದು ಒಡಿಶಾದ ಸೂರ್ಯ ದೇಗುಲದ ಕಲೆಯ ರೀತಿಯಲ್ಲಿಯೇ ಕಟ್ಟಲಾಗಿದೆ. ಹೊಯ್ಸಳ, ಚೋಳ, ಚಾಲುಕ್ಯ ಹಾಗೂ ಗಂಗರ ವಾಸ್ತು ಶಿಲ್ಪ ಕೂಡ ಇದರಲ್ಲಿ ಬೆರೆತಿದೆ. ಇದನ್ನ ಉದ್ಘಾಟನೆ ಮಾಡೋದಕ್ಕೆ ಪ್ರಧಾನಿ ಮೋದಿ ಅವರು ಬರ್ತಿದ್ದಾರೆ.

ನಾಳೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟಿನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ತಪೋವನಕ್ಕೆ ಮೋದಿ ಅವರು ಬಂದು ಇಳಿಯಲಿದ್ದಾರೆ. ಅಲ್ಲಿಂದ ಕಾಲಭೈರವನ ದೇಗುಲಕ್ಕೆ ಬಂದು ದರ್ಶನ ಪಡೆಯಲಿದ್ದಾರೆ. ನಂತರ ಭೈರವೈಕ್ಯ ಮಂದಿರವನ್ನ ಲೋಕಾರ್ಪಣೆ ಮಾಡುತ್ತಾರೆ. ಬಳಿಕ ಮಂದಿರದ ಗರ್ಭಗುಡಿಯ ಪಕ್ಕದಲ್ಲಿ ಇರುವ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಯ ದರ್ಶನ ಮಾಡಲಿದ್ದಾರೆ. ಬಳಿಕ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅದೇ ಕಾರ್ಯಕ್ರಮದಲ್ಲಿ ಗೋ ರಕ್ಷಕನಾಥ ಸಿದ್ಧ ಸಿದ್ಧ ಸಿದ್ಧಾಂತ ಎಂಬ ಗ್ರಂಥವನ್ನ ಬಿಡುಗಡೆ ಕೂಡ ಮಾಡಲಿದ್ದಾರೆ. ಕಾರ್ಯಕ್ರಮವನ್ನೆಲ್ಲ ಮುಗಿಸಿ, ವಾಪಾಸ್ ದೆಹಲಿಗೆ ಹೊರಡಲಿದ್ದಾರೆ. ಆದಿಚುಂಚನಗಿರಿ‌ಮಠದ ಭಕ್ತರು ಇದನ್ನ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಿದ ಬಳಿಕ ಭಕ್ತರು ಕೂಡ ನೋಡುವುದಕ್ಕೆ ಅವಕಾಶವನ್ನ ನೀಡಲಾಗುತ್ತದೆ. ಭಕ್ತರು ಕೂಡ ಶ್ರೀ ಗುರು ಭೈರವೈಕ್ಯ ಮಂಟಪವನ್ನ ಕಣ್ತುಂಬಿಕೊಳ್ಳಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...