Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

---Advertisement---

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

ಚಿತ್ರದುರ್ಗ. ಸೆ.20 :  ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರೂ.1400 ಕೋಟಿಗೂ ಹೆಚ್ಚು ಹಣವನ್ನು ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬಿಡುಗಡೆ ಮಾಡಿದೆ ಎಂದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಶಾರದ ಸಭಾ ಭವನದಲ್ಲಿ ಶುಕ್ರವಾರ ಪಿಎಂ ವಿಶ್ವಕರ್ಮ ಯೋಜನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರೀಯ ಪಿಎಂ ವಿಶ್ವಕರ್ಮ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಹಾಗೂ ಫಲಾನುಭವಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಸುಮಾರು 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೋಂದಣಿ ಮಾಡಿಕೊಂಡಿದ್ದು, 8 ಲಕ್ಷ ಕುಶಲಕರ್ಮಿಗಳು ಉನ್ನತ ತರಬೇತಿಯನ್ನೂ ಪಡೆದಿದ್ದಾರೆ.

ಈಗಾಗಲೇ 1.60 ಲಕ್ಷಕ್ಕೂ ಹೆಚ್ಚು ಜನರು ಇದರ ಲಾಭ ಪಡೆದಿದ್ದಾರೆ.  ಕುಶಲಕರ್ಮಿಗಳಿಗೆ ರೂ.15 ಸಾವಿರ ಟೂಲ್ ಕಿಟ್ ಪ್ರೋತ್ಸಾಹವನ್ನು ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸಾಮಾಜಿಕ ಕಳಕಳಿ ಮತ್ತು ಕಾಳಜಿಯಿಂದ ದೇಶದ  18 ವಿವಿಧ ಕ್ಷೇತ್ರಗಳ ಅಡಿಯಲ್ಲಿ ಕುಲದ ಕಸುಬು ನಂಬಿ ಜೀವನ ನಡೆಸುತ್ತಿರುವ ವರ್ಗದವರಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ, ವ್ಯಾಪಾರ ವಹಿವಾಟು  ಸೌಲಭ್ಯ ಕಲ್ಪಿಸುವ ಕಳೆದ ವರ್ಷ ಸೆ.17ರಂದು ರೂ.13 ಸಾವಿರ ಕೋಟಿ ವೆಚ್ಚದಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಬಡಿಗೆ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಿಗ ವೃತ್ತಿ ಮಾಡುವವರು, ಟೈಲರಿಂಗ್, ಚಾಫೆ-ಕಸ ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು, ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ ತಯಾರಕರು, ದೋಬಿ, ಅಭರಣ ತಯಾರಕರು, ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ, ಚಮ್ಮಾರ, ಪಾದರಕ್ಷೆ ತಯಾರಕರು, ಬೀಗ ತಯಾರಿಕಾ ಕುಶಲಕರ್ಮಿಗಳು ಸೇರಿದಂತೆ ಹೀಗೆ 18 ಬಗೆಯ ಕುಲಕಸುಬು ನಂಬಿ ಜೀವನ ನಡೆಸುವ ವಿಶ್ವಕರ್ಮ ಪಾಲುದಾರರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಜಾರಿಗೆ ತರುವ ಮೂಲಕ ರೂ.3 ಲಕ್ಷದವರೆಗೂ ಸಾಲ ಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಅದಲ್ಲದೇ 30 ತಿಂಗಳ ಅವಧಿಯೊಳಗೆ ಅತೀ ಕಡಿಮೆ ಬಡ್ಡಿಯಲ್ಲಿ ಶೇ.5 ಬಡ್ಡಿದರಲ್ಲಿ ಸಾಲ ಮರುಪಾವತಿಗೂ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಶೇ.8ರಷ್ಟು  ಬಡ್ಡಿ ಸಬ್ಸಿಡಿ ತುಂಬಲಿದೆ ಎಂದರು.

ಸರ್ಕಾರದ ಅಂಗಸಂಸ್ಥೆಯಾದ  ನಕಾಫ್ ಸಂಸ್ಥೆಯ ತರಬೇತಿ ವ್ಯವಸ್ಥಾಪಕ ಉಮಾಕಾಂತ್ ಮನ್ನಾಳೆ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯಡಿ ಚಿತ್ರದುರ್ಗ ನಗರದ ಅಮ್ಮ ಪಬ್ಲಿಕ್ ಶಾಲೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಾಲಾಕಾರ್, ಬಾಸ್ಕೆಟ್ ಮೇಕರ್, ದೋಬಿ ಸೇರಿದಂತೆ ವಿವಿಧ ಬಗೆಯ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ತರಬೇತಿ ಕೋರ್ಸ್ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 700 ಜನರಿಗೆ ತರಬೇತಿ ನೀಡಲಾಗಿದ್ದು, ಎಲ್ಲರಿಗೂ ಶಿಷ್ಯವೇತನ ಹಾಗೂ ಟೂಲ್ ಕಿಟ್ ವಿತರಣೆ ಹಾಗೂ ಸಾಲ-ಸೌಲಭ್ಯಕ್ಕೂ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇವಣ್ಣ ಸೇರಿದಂತೆ ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment