Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೋಕ್ಸೋ ಕಾಯ್ದೆ : ಠಾಣೆಯಲ್ಲಿ ಅರಾಜಕತೆ : ಬಾಲಕಿಯ ವಿವಸ್ತ್ರಗೊಳಿಸಿ ಫೋಟೋ ತೆಗೆದ ಎಎಸ್‌ಐ

Facebook
Twitter
Telegram
WhatsApp

 

ಸುದ್ದಿಒನ್

ಪೊಲೀಸ್ ಠಾಣೆಗೆ ಬಂದಿದ್ದ ಬಾಲಕಿಯ ಮೇಲೆ ಎಎಸ್‌ಐ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಕೆಯನ್ನು ರಕ್ಷಿಸಬೇಕಿದ್ದ ಪೊಲೀಸ್ ಅಸಭ್ಯವಾಗಿ ವರ್ತಿಸಿದ್ದಾನೆ. ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಎಎಸ್‌ಐ ಠಾಣೆಯಲ್ಲೇ ವಿಕೃತಿ ಮೆರೆದಿದ್ದಾನೆ.

ಎಎಸ್‌ಐ ವರ್ತನೆಯಿಂದ ಬೇಸತ್ತ ಬಾಲಕಿ ಮೇಲಧಿಕಾರಿಗಳಿಗೆ ದೂರು ನೀಡಿದ್ದಾಳೆ. ಇದರೊಂದಿಗೆ ಎಸ್‌ಎಸ್‌ಐ ಪರಾರಿಯಾಗಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಎಎಸ್‌ಐ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಎಸ್‌ಎಸ್‌ಐ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ. ಇಂತಹ ಭೀಕರ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಏನಾಯಿತು ?

ಅಸ್ಸಾಂನ ನಲ್ಬರಿ ಜಿಲ್ಲೆಯ ಘೋಗ್ರಾಪರ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.  ಜೂನ್ 21 ರಂದು 17 ವರ್ಷದ ಯುವತಿ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆಂದು ಆಕೆಯ ಕುಟುಂಬ ಸದಸ್ಯರು ಘೋಗ್ರಾಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ನಂತರ ಘೋಗ್ರಾಪರ್ ಠಾಣೆಗೆ ಕರೆದೊಯ್ದು ಬಾಲ್ಯವಿವಾಹ ಪ್ರಕರಣ ದಾಖಲಿಸಲಾಗಿದೆ.
ಈ ವೇಳೆ, ಘೋಗ್ರಾಪರ್ ಎಎಸ್‌ಐ ಭಿಮನ್ ರಾಯ್ ತಮ್ಮ ವಶದಲ್ಲಿದ್ದ ಹುಡುಗಿಯ ಮೇಲೆ ಅಸಭ್ಯವಾಗಿ ವರ್ತಿಸಿ ಅಶ್ಲೀಲ ಕೃತ್ಯಗಳನ್ನು ಎಸಗಿದ್ದಾನೆ. ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾಗ ಆಕೆಯನ್ನು ವಿವಸ್ತ್ರಗೊಳಿಸಿದ್ದಾನೆ. ಬಳಿಕ ಆಕ್ಷೇಪಾರ್ಹ ಫೋಟೋಗಳನ್ನು ತೆಗೆದಿದ್ದಾನೆ.

ನಂತರ ಬಾಲಕಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಎಎಸ್‌ಐ ಭಿಮನ್ ರಾಯ್ ಅವರು ಪೊಲೀಸ್ ಠಾಣೆಯಲ್ಲಿ ತನಗೆ ಬೆದರಿಕೆ ಹಾಕಿದರು ಮತ್ತು ಬಟ್ಟೆ ತೆಗೆಯುವಂತೆ ಒತ್ತಾಯಿಸಿದರು. ಎಸ್‌ಎಸ್‌ಐ ತನ್ನೊಂದಿಗೆ ಅನುಚಿತವಾಗಿ ವರ್ತಿಸಿ ನನ್ನನ್ನು ವಿವಸ್ತ್ರಗೊಳಿಸಿ ಛಾಯಾಚಿತ್ರ ತೆಗೆದಿದ್ದಾರೆ ಎಂದು ದೂರಿದ್ದಾಳೆ.

ಪ್ರತಿಕ್ರಿಯಿಸಿದ ಡಿಜಿಪಿ

ಈ ಘಟನೆ ಬಗ್ಗೆ ಅಸ್ಸಾಂ ಡಿಜಿಪಿ ಜಿಪಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಪ್ರಕರಣದ ವಿವರಗಳನ್ನು ಶುಕ್ರವಾರ ಮಾಧ್ಯಮಗಳಿಗೆ ಬಹಿರಂಗಪಡಿಸಲಾಗಿದೆ. ನಲ್ಬರಿ ಜಿಲ್ಲೆಯ ಘೋಗ್ರಾಪರ್ ಪೊಲೀಸ್ ಠಾಣೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಬ್ ಇನ್ಸ್‌ಪೆಕ್ಟರ್ ಬಿಮನ್ ರಾಯ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು  ಹೇಳಿದ್ದಾರೆ.

ತನಿಖೆ ನಡೆಸಿ ಇನ್ಸ್ ಪೆಕ್ಟರ್ ನನ್ನು ಅಮಾನತುಗೊಳಿಸಲಾಗಿದೆ ಎಂದು ಡಿಜಿಪಿ ಜಿಪಿ ಸಿಂಗ್ ತಿಳಿಸಿದ್ದಾರೆ. ಸದ್ಯ ಆರೋಪಿ ಎಎಸ್‌ಐ ಬಿಮನ್ ರಾಯ್ ತಲೆಮರೆಸಿಕೊಂಡಿದ್ದಾನೆ. ಬಿಮನ್ ರಾಯ್ ಇರುವ ಸ್ಥಳವನ್ನು ಬಹಿರಂಗಪಡಿಸಿದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಡಿಜಿಪಿ ಟ್ವೀಟ್ ಮಾಡಿದ್ದಾರೆ.

ಎಸ್ಪಿ ಪ್ರತಿಕ್ರಿಯೆ

ಮತ್ತೊಂದೆಡೆ ಅಪ್ರಾಪ್ತರನ್ನು ಸ್ಟೇಟ್ ಹೋಮ್ ಬದಲಿಗೆ ಪೊಲೀಸ್ ಠಾಣೆಯಲ್ಲೇ ಇರಿಸಿರುವುದು ಪೊಲೀಸರ ತಪ್ಪು ಎಂದು ನಲ್ಬರಿ ಜಿಲ್ಲಾ ಎಸ್ಪಿ ಹೇಳಿದ್ದಾರೆ. ಅಪ್ರಾಪ್ತರ ವಿಷಯದಲ್ಲಿ ಕೆಲವು ಸೂಚನೆಗಳು ಮತ್ತು ನಿಯಮಗಳು ಜಾರಿಯಲ್ಲಿದ್ದು, ಎಲ್ಲಾ ಪೊಲೀಸರು ಅದನ್ನು ಪಾಲಿಸಬೇಕು.  ಅಪ್ರಾಪ್ತರನ್ನು ಪೊಲೀಸ್ ಠಾಣೆಯಲ್ಲಿ ಇಡಬಾರದು.ಹಾಗೆ ಮಾಡುವವರ ವಿರುದ್ಧ ಕಾನೂನು ಮತ್ತು ಇಲಾಖಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಾಲಕಿಯನ್ನು ಸ್ಟೇಟ್‌ ಹೋಮ್‌ನಲ್ಲಿ ಇರಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!