Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೋಕ್ಸೋ ಕೇಸ್ : ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್

Facebook
Twitter
Telegram
WhatsApp

ಬೆಂಗಳೂರು: ಪೋಕ್ಸೋ ಕೇಸಿನಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇತ್ತು. ಆದರೆ ಯಡಿಯೂರಪ್ಪ ಅವರು ಖ ಕೇಸಿನಿಂದ ರಿಲ್ಯಾಕ್ಸ್ ಆಗಿದ್ದಾರೆ. ಬಿಎಸ್ವೈ ಅವರು ಜಾಮೀನುಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಬಂಧಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕೋರ್ಟಗ ಸೂಚನೆ ನೀಡಿದೆ. ಈ ಮೂಲಕ ಕೇಸಲ್ಲಿ ಕೊಂಚ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ಅವರ ಬಗ್ಗೆ ಸೂಚನೆ ನೀಡಿರುವ ಕೋರ್ಟ್, ಯಡಿಯೂರಪ್ಪ ಮಾಜಿ ಸಿಎಂ. ಜೀವನದ ಸಂಧ್ಯಾಕಾಲದಲ್ಲಿ ಜೀವಿಸುತ್ತಾ ಇದ್ದಾರೆ. ಅವರ ಕಸ್ಟಡಿಯ ವಿಚಾರಣೆಯ ಅಗತ್ಯ ಕಾಣಿಸ್ತಾ ಇಲ್ಲ. ಆರೋಗ್ಯದ ಸಮಸ್ಯೆಗಳು ಇರುತ್ತವೆ. ಆರೋಪಿ ಓಡಿ ಹೋಗುವ ಅಂಶಗಳು ಇಲ್ಲೇನು ಕಾಣಿಸುತ್ತಿಲ್ಲ. ಎರಡು ವಾರಗಳ ಬಳಿಕ ಅರ್ಜಿಯ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಅರೆಸ್ಟ್ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪ ಅವರಿಗೆ ಜಾಮೀನು ನೀಡಲು ಎಜಿ ಶಶಿಕಿರಣ್ ಶೆಟ್ಟಿ ವಿರೋಧಿಸಿದರು. ನಾವು ಎರಡು ಬಾರಿ‌ ನೊಟೀಸ್ ಕೊಟ್ಟಿದ್ದೇವೆ. ಆದ್ರೂ ಆರೋಪಿ ವಿಚಾರಣೆಗೆ ಬಂದಿಲ್ಲ. ನಾವು ಆರೋಪಿಯ ವಾಯ್ಸ್ ಸ್ಯಾಂಪಲ್ ಪಡೆದು ವರದಿ ಪಡೆದಿದ್ದೇವೆ. ವಿಡಿಯೋ ಸಾಕ್ಷಿಯ ಎಫ್ಎಸ್ಎಲ್ ವರದಿ ಸಹ ಪಡೆದಿದ್ದೇವೆ. ವಿಚಾರಣೆಗೆ ಹಾಜರಾಗಲು ನಾವು ನೊಟೀಸ್ ಕೊಟ್ಟ ಬಳಿಕ ಆರೋಪಿ ಡೆಲ್ಲಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಹೇಳಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಸದ್ಯಕ್ಕೆ ಅರೆಸ್ಟ್ ಮಾಡುವಂತೆ ಇಲ್ಲ, ಮುಂದಿನ ಅರ್ಜಿ ವಿಚಾರಣೆಯ ತನಕ ಯಥಾ ಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕವಾಡಿಗರ ಹಟ್ಟಿ ಅಭಿವೃದ್ದಿಗೆ ಕ್ರಮ :  ನಗರಸಭೆ ಆಯುಕ್ತೆ ರೇಣುಕಾ ಸ್ಪಷ್ಟನೆ

ಚಿತ್ರದುರ್ಗ ಜೂ. 18 : ನಗರದ ಹೊರ ವಲಯದಲ್ಲಿರುವ ಕವಾಡಿಗರ ಹಟ್ಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿದ್ದು, ತ್ವರಿತ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.   ಕಳೆದ

ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಎಂದು ಉದಾಸೀನ ಮಾಡಬೇಡಿ : ಡಾ.ಬಿ.ಗುರುರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.18 : ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಉದಾಸೀನ ಮಾಡಬೇಡಿ. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ

ಚಿತ್ರದುರ್ಗ | ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸ : ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್ 18 : ಎ.ಪಿ.ಎಂ.ಸಿ. ಆವರಣದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ

error: Content is protected !!