Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೋಕ್ಸೋ ಕೇಸ್ : ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್

---Advertisement---

ಬೆಂಗಳೂರು: ಪೋಕ್ಸೋ ಕೇಸಿನಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇತ್ತು. ಆದರೆ ಯಡಿಯೂರಪ್ಪ ಅವರು ಖ ಕೇಸಿನಿಂದ ರಿಲ್ಯಾಕ್ಸ್ ಆಗಿದ್ದಾರೆ. ಬಿಎಸ್ವೈ ಅವರು ಜಾಮೀನುಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಬಂಧಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕೋರ್ಟಗ ಸೂಚನೆ ನೀಡಿದೆ. ಈ ಮೂಲಕ ಕೇಸಲ್ಲಿ ಕೊಂಚ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ಅವರ ಬಗ್ಗೆ ಸೂಚನೆ ನೀಡಿರುವ ಕೋರ್ಟ್, ಯಡಿಯೂರಪ್ಪ ಮಾಜಿ ಸಿಎಂ. ಜೀವನದ ಸಂಧ್ಯಾಕಾಲದಲ್ಲಿ ಜೀವಿಸುತ್ತಾ ಇದ್ದಾರೆ. ಅವರ ಕಸ್ಟಡಿಯ ವಿಚಾರಣೆಯ ಅಗತ್ಯ ಕಾಣಿಸ್ತಾ ಇಲ್ಲ. ಆರೋಗ್ಯದ ಸಮಸ್ಯೆಗಳು ಇರುತ್ತವೆ. ಆರೋಪಿ ಓಡಿ ಹೋಗುವ ಅಂಶಗಳು ಇಲ್ಲೇನು ಕಾಣಿಸುತ್ತಿಲ್ಲ. ಎರಡು ವಾರಗಳ ಬಳಿಕ ಅರ್ಜಿಯ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಅರೆಸ್ಟ್ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪ ಅವರಿಗೆ ಜಾಮೀನು ನೀಡಲು ಎಜಿ ಶಶಿಕಿರಣ್ ಶೆಟ್ಟಿ ವಿರೋಧಿಸಿದರು. ನಾವು ಎರಡು ಬಾರಿ‌ ನೊಟೀಸ್ ಕೊಟ್ಟಿದ್ದೇವೆ. ಆದ್ರೂ ಆರೋಪಿ ವಿಚಾರಣೆಗೆ ಬಂದಿಲ್ಲ. ನಾವು ಆರೋಪಿಯ ವಾಯ್ಸ್ ಸ್ಯಾಂಪಲ್ ಪಡೆದು ವರದಿ ಪಡೆದಿದ್ದೇವೆ. ವಿಡಿಯೋ ಸಾಕ್ಷಿಯ ಎಫ್ಎಸ್ಎಲ್ ವರದಿ ಸಹ ಪಡೆದಿದ್ದೇವೆ. ವಿಚಾರಣೆಗೆ ಹಾಜರಾಗಲು ನಾವು ನೊಟೀಸ್ ಕೊಟ್ಟ ಬಳಿಕ ಆರೋಪಿ ಡೆಲ್ಲಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಹೇಳಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಸದ್ಯಕ್ಕೆ ಅರೆಸ್ಟ್ ಮಾಡುವಂತೆ ಇಲ್ಲ, ಮುಂದಿನ ಅರ್ಜಿ ವಿಚಾರಣೆಯ ತನಕ ಯಥಾ ಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment