ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಾಮರಾಜನಗರ: ಮೊದಲೇ ಹುಲಿಗಳ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಆಗ್ತಾ ಇದೆ. ಹುಲಿಗಳನ್ನ ಸಂರಕ್ಷಣೆ ಮಾಡಿ ಎಂದು ಸಾಕಷ್ಟು ಜಾಗೃತಿಯನ್ನು ಮೂಡಿಸಲಾಗುತ್ತದೆ. ಆದರೂ ಅದರ ಬಗ್ಗೆ ಕಾಳಜಿ ವಹಿಸುವವರು ಕಡಿಮೆಯೇ. ಇದರ ನಡುವೆ ಒಂದಲ್ಲ ಎರಡಲ್ಲ ಐದು ಹುಲಿಗಳು ಸಾವನ್ನಪ್ಪಿವೆ. ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ವನ್ಯಧಾಮದ ಕೊಪ್ಪ ವಲಯದಲ್ಲಿ ಈ ಘಟನೆ ನಡೆದಿದೆ.
ಐದು ಹುಲಿಗಳು ಸುಮಾರು ಕೇವಲ 50 ಅಡಿಗಳಷ್ಟು ಅಂತರದಲ್ಲಿಯೇ ಸಾವನ್ನಪ್ಪಿವೆ. ಈ ಸಂಬಂಧ ತನಿಖೆ ಕೈಗೊಂಡಿದ್ದು, ಪ್ರಾಥಮಿಕ ತನಿಖೆಯಲ್ಲಿ ವಿಷ ಪ್ರಾಶನದಿಂದ ಈ ರೀತಿ ಸಾವು ಸಂಭವಿಸಿರುವುದು ಎಂದು ತಿಳಿದು ಬಂದಿದೆ. ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದಾವೆ. ಈ ವಿಚಾರ ತಿಳಿದ ಕೂಡಲೇ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.
ಅಷ್ಟೇ ಅಲ್ಲ ಮಜುರಿ ದಿನಗಳ ಒಳಗೆ ತನಿಖೆಯ ವರದಿ ಒಪ್ಪಿಸಲು ಸೂಚಿಸಲಾಗಿದೆ. ಒಂದು ವೇಳೆ ಈ ವಿಷಪ್ರಾಶನದ ಹಿಂದೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವಿದ್ದರೆ ಸಂಬಂಧ ಪಟ್ಟವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನು ಇಂದಿರಾ ಗಾಂಧಿ ಅವರು ಹುಲಿ ಯೋಜನೆ ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆ ಕ್ರಮ ವಹಿಸಲಾಗಿದೆಮ 563 ಹುಲಿಗಳೊಂದಿಗೆ ಕರ್ನಾಟಕ ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲಿಯೇ ಹುಲಿಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಹೀಗಾಗಿ ಹುಲಿಗಳ ರಕ್ಷಣೆ ಬಹಳ ಮುಖ್ಯವಾಗಿದೆ. ಈಗ ವಿಷಪ್ರಾಶನ ಆಗಿದ್ದೇಗೆ ಎಂಬುದರ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್