Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೆಬೆಲ್ ಸ್ಟಾರ್ ಪುತ್ರ ಬೀಗರೂಟದಲ್ಲಿ ಗಲಾಟೆ : ಪೊಲೀಸರು ಪರಿಸ್ಥಿತಿ ನಿಭಾಯಿಸಲು ಹರಸಾಹಸ..!

Facebook
Twitter
Telegram
WhatsApp

ಇಂದು ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದಪ್ಪ ಅವರ ಬೀಗರೂಟದ ಕಾರ್ಯಕ್ರಮವಿತ್ತು. ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ ಬೀಗರೂಟಕ್ಕೆ ಏರ್ಪಾಡು ಮಾಡಲಾಗಿತ್ತು. 15 ಎಕರೆ ಜಾಗದಲ್ಲಿ ಔತಣಕೂಟಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಎಲ್ಲಾ ಅಭಿಮಾನಿಗಳಿಗೂ ಆಹ್ವಾನ ನೀಡಿದ್ದರು. ಜನಸಾಗರದಿಂದ ಸಾಕಷ್ಟು ಸಮಸ್ಯೆ ಉಂಟಾಗಿದೆ. ನೂಕು ನುಗ್ಗಲಾಗಿದೆ.

ಮಂಡ್ಯದ ಸೊಸೆಯನ್ನು ನೋಡುವುದಕ್ಕೆ ಜನ ನುಗ್ಗಿ ನುಗ್ಗಿ ಬಂದರು. ಊಟದ ಕುರ್ಚಿಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟವೆಲ್ಲಾ ನೆಲದ ಮೇಲೆ ಬಿದ್ದಿತ್ತು. ಬೀಗರೂಟಕ್ಕೆ ಏನಿಲ್ಲಾ ಅಂದ್ರು ಸುಮಾರು 40 ಸಾವಿರ ಜನ ಬಂದಿದ್ರು ಎನ್ನಲಾಗ್ತಾ ಇದೆ. ಆ ಕಡೆ ಅಂಬಿಗೆ ಇಷ್ಡವಾದ ಆಹಾರವನ್ನೇ ಮಾಡಿಸಲಾಗಿತ್ತು.

ಇಷ್ಟು ಜನ ಸೇರಿದ್ದು, ಪೊಲೀಸರಿಗಂತು ಹರಸಾಹಸವೇ ಆಗಿ ಹೋಯ್ತು. ಜನರ ನೂಕು ನುಗ್ಗಲು ತಡೆಯಲು ಪೊಲೀಸರು ಸಾಕಷ್ಟು ಕಷ್ಟಪಟ್ಟಿದ್ದಾರೆ. ನಿಯಂತ್ರಿಸಲು ಕಷ್ಟವಾದಾಗ ಲಾಠಿಚಾರ್ಜ್ ಮಾಡಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಜನ ಬಂದಿದ್ದಾರೆ. ಬೀಗರೂಟದಲ್ಲಿ ಸಾಕಷ್ಟು ಜನಜಾತ್ರೆ ನೆರೆದಿದ್ದರಿಂದ ಪೊಲೀಸರಿಗೆ ತುಂಬಾನೇ ಕಷ್ಟವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!