ಬಿ.ವೈ.ವಿಜಯೇಂದ್ರರನ್ನ ವಶಕ್ಕೆ ಪಡೆದ ಪೊಲೀಸರು ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ..!

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ನ್ಯಾಯ ಸಿಗಬೇಕು, ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಅವರ ಹೆಸರುಗಳನ್ನು ಎಫ್ಐಆರ್ ನಲ್ಲಿ ಸೇರಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿ ಇಂದು ಹೋರಾಟ ಮಾಡುತ್ತಿದ್ದಾರೆ. ಕೊಡಗಿನಲ್ಲಿ ಈ ಸಂಬಂಧ ಹೋರಾಟ ನಡೆಯುತ್ತಿದೆ. ಈ ವೇಳೆ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಬಯ್ ಸೋಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಬಿವೈ ವಿಜಯೇಂದ್ರ ಅವರು ಕುಟುಂಬಸ್ಥರಿಗೆ ಸಾಂತ್ವಾನವನ್ನು ಹೇಳಿದ್ದಾರೆ. ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬೆದರಿಕೆ ಹಾಗೂ ಒತ್ತಡ ಹಾಕಿದ್ದಾರೆ ಎಂದರೆ ಇದು ಬಹಳ ಖಂಡನೀಯ. ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಶಾಸಕರಾದ ಪೊನ್ನಣ್ಣ ಹಾಗೂ ಮಂಥರ್ ಗೌಡ ಹೆಸರುಗಳನ್ನು ಎಫ್ಐಆರ್ ನಲ್ಲಿ ಸೇರಿಸುವಂತೆ ಹೋರಾಟ ಮುಂದುವರೆಸಲಾಗಿದೆ. ಈ ಸರ್ಕಾರ ನಮ್ಮನ್ನು ಬಂಧಿಸಿದ್ದು, ವಿಬಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರವು ದ್ವೇಷ, ಬೆದರಿಕೆ ಮತ್ತು ಭಯದಲ್ಲಿ ಬೇರೂರಿರುವ ಅಪಾಯಕಾರಿ ರಾಜಕೀಯವನ್ನು ಮುಂದುವರೆಸಿದೆ. ಈ ಆಡಳಿತ ವೈಫಲ್ಯಗಳನ್ನು ಪ್ರಶ್ನಿಸಲು ಅಥವಾ ಬಹಿರಂಗಪಡಿಸಲು ಧೈರ್ಯ ಮಾಡುವ ಯಾರನ್ನಾದರಯು ಗುರಿಯಾಗಿಸಿಕೊಂಡು ಮೌನಗೊಳಿಸಲಾಗುತ್ತಿದೆ. ಬಿಜೆಪಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರಹ ಈ ಆಡಳಿತದ ಸೇಡಿನ ಕ್ರಮಗಳಿಗೆ ದುರಂತವಾಗಿ ಬಲಿಯಾಗಿದ್ದಾರೆ. ಸ್ಥಳೀಯ ಕಾಂಗ್ರೆಸ್ ಶಾಸಕರ ತಪ್ಪುಗಳ ವಿರುದ್ಧ ಧ್ವನಿ ಎತ್ತಿದ್ದು ಅವರ ಏಕೈಕ ತಪ್ಪು. ಶಾಸಕ ಮತ್ತು ಸ್ಥಳೀಯ ಪೊಲೀಸರ ನಡುವಿನ ಸ್ಪಷ್ಟ ಸಂಬಂಧದಲ್ಲಿ ವಿನಯ್ ಅವರಿಗೆ ನಿರಂತರವಾಗಿ ಕಿರುಕುಳ ನೀಡಲಾಗಿದೆ ಎಂದು ಬಿವೈ ವಿಜಯೇಂದ್ರ ಅವರು ಆಕ್ರೋಶ ಹೊರ ಹಾಕಿದರು.

suddionenews

Recent Posts

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯಿಂದ ಡಾ.ಕೋಮಲ ವಿ.ಮರೆಗುದ್ದಿಗೆ ಸನ್ಮಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

15 minutes ago

ವಿದ್ಯಾರ್ಥಿಗಳು ಆರ್ಥಿಕವಾಗಿ ಸಬಲರಾಗಬೇಕು : ಯೋಗೀಶ್ ಸಹ್ಯಾದ್ರಿ

ಚಿತ್ರದುರ್ಗ : ವಿದ್ಯಾರ್ಥಿಗಳು ಓದಿನ ಸಮಯದಲ್ಲೇ ಆರ್ಥಿಕವಾಗಿ ಸಬಲೀಕರಣವಾಗಬೇಕು, ಆ ನಿಟ್ಟಿನಲ್ಲಿ ಶಿಕ್ಷಣದಲ್ಲಿ ಮಾರ್ಪಾಡು ಆದರೆ ಮಾತ್ರ ವಿದ್ಯಾರ್ಥಿಗಳು ಮುಂದಿನ…

29 minutes ago

ಒಳಮೀಸಲು ಶೀಘ್ರ ಜಾರಿ ಮಾಡಿ, ಉದ್ಯೋಗ ನೇಮಕಾತಿ ಕೈಬಿಡಿ : ಮಾಜಿ ಸಚಿವ ಎಚ್.ಆಂಜನೇಯ

  ಸುದ್ದಿಒನ್, ಚಿತ್ರದುರ್ಗ, ಏ.11 ಒಳಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಬಹಳಷ್ಟು ವಿಳಂಬ ನೀತಿ ಮಾಡಿದೆ ಎಂಬ ಆತಂಕವಿದ್ದು, ಅದನ್ನು…

45 minutes ago

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ; ಹೇಳಿದ್ದೇನು ಡಿಕೆ ಶಿವಕುಮಾರ್..?

  ಬೆಂಗಳೂರು; ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆಯ ಚರ್ಚೆ ನಡೆಯುತ್ತಲೆ ಇದೆ. ಸಿಎಂ…

1 hour ago

ಜಾತಿ ಗಣತಿ ವರದಿ ವಿಚಾರ ; ಇಂದಿನ ಸಂಪುಟದಲ್ಲಿ ಏನಾಯ್ತು..?

  ಬೆಂಗಳೂರು; ಇಂದು ಬೆಳಗ್ಗೆಯಿಂದಾನೇ ಎಲ್ಲರ ಚಿತ್ತ ಸಚಿವ ಸಂಪುಟದತ್ತ ನೆಟ್ಟಿತ್ತು. ಯಾಕಂದ್ರೆ ಜಾತಿ ಗಣತಿ ವರದಿ ಜಾರಿಯಾಗುತ್ತದೆ ಎಂಬ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಏಪ್ರಿಲ್. 11 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.11 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago