ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಮತದಾನ ಶಾಂತಿಯುತವಾಗಿ ನಡೆಸುವ ಸಲುವಾಗಿ ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ 1808 ಜನರ ವಿರುದ್ಧ ಕಾನೂನು ಪ್ರಕ್ರಿಯೆ ಜರುಗಿಸಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ಎದುರಿಗೆ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. 8 ಜನರಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮತದಾನ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಜಿಲ್ಲೆಗೆ ಎರಡು ಸಿ.ಆರ್.ಪಿ.ಎಫ್ ತುಕಡಿಗಳು ಆಗಮಿಸಿವೆ. ಇದುವರೆಗೂ ಜಿಲ್ಲೆಯಲ್ಲಿ ಗಲಭೆ ಉಂಟಾಗುವ 41 ಕಡೆ ಪೊಲೀಸ್ ಬಲ ಪ್ರದರ್ಶನವನ್ನು ಮಾಡಲಾಗಿದೆ. 36 ಕಡೆ ರೂಟ್ ಮಾರ್ಚ್ ಮಾಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ವೈರ್ಲೆಸ್ ಸಂವಹನ ಸ್ಥಾಪಿಸಲಾಗಿದೆ. 20 ಮತಗಟ್ಟೆ ವ್ಯಾಪ್ತಿಯಲ್ಲಿ ಒಂದು ಪಿ.ಎಸ್.ಐ ನೇತೃತ್ವದಲ್ಲಿ ಸೆಕ್ಟರ್ ಪೊಲೀಸ್ ತಂಡ, 4 ಸೆಕ್ಟರ್ ಸಂಚಾರಿ ಪೊಲೀಸ್ ತಂಡಗಳ ಮೇಲೆ ಸರ್ಕ್ಲ್ ಇನ್ಸೆಪ್ಟರ್ಗಳ ಪೊಲೀಸ್ ತಂಡ, 6 ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒರ್ವ ಡಿವೈಎಸ್ಪಿ ಹಾಗೂ 2 ಎ.ಎಸ್.ಪಿ ಹಾಗೂ ಒಬ್ಬ ಎಸ್ಪಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಒಟ್ಟಾರೆ 3300 ಪೊಲೀಸ್ ಸಿಬ್ಬಂದಿಗಳನ್ನು ಮತದಾನ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಲ್ಲಿ 950 ಗೃಹ ರಕ್ಷಕರು, 6 ಕೆ.ಎಸ್.ಆರ್.ಪಿ.ಸಿ ತುಕಡಿ ಹಾಗೂ ಸಿ.ಆರ್.ಪಿ.ಎಫ್ ತುಕಡಿಗಳು ಇರಲಿವೆ. ಜಿಲ್ಲೆಯಲ್ಲಿ 280 ಸೂಕ್ಷ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಉಳಿದಂತೆ ಪ್ರತಿ ಮತಗಟ್ಟೆ ಒರ್ವ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ. ಮತದಾನ ತರುವಾಯ ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ದಿನ ಮತ ಎಣಿಕೆ ಕೇಂದ್ರಗಳನ್ನು ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್