Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ ; ಹಳೆಯ ವಾಹನಗಳ ತೆರವು

Facebook
Twitter
Telegram
WhatsApp

ಚಿತ್ರದುರ್ಗ : ನಗರದ ಹಲವೆಡೆ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕೆಟ್ಟು ನಿಂತಿದ್ದ ನೂರಾರು ಹಳೆಯ ವಾಹನಗಳನ್ನು ಮಂಗಳವಾರ ಪೊಲೀಸ್ ಇಲಾಖೆ ತೆರವುಗೊಳಿಸಿದೆ.

ನಗರದ ಚಂದ್ರವಳ್ಳಿ ರಸ್ತೆ, ಚಳ್ಳಕೆರೆ ಗೇಟ್, ರಾಷ್ಟ್ರೀಯ ಹೆದ್ದಾರಿ-13 ಸೇರಿದಂತೆ ಚಿತ್ರದುರ್ಗದ ವಿವಿಧೆಡೆಯ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕೆಟ್ಟು ನಿಂತಿದ್ದ ಹಳೆಯ ವಾಹನಗಳನ್ನು ತೆರವುಗೊಳಿಸುಂತೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ತೆರವಿಗೆ ಕ್ರಮಕೈಗೊಳ್ಳಲಾಯಿತು.

ಪೊಲೀಸ್ ಸಿಬ್ಬಂದಿ ಇಲಾಖೆಯ ವಾಹನಗಳ ಸಹಾಯದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟು ನಿಂತಿದ್ದ ನೂರಾರು ವಾಹನಗಳನ್ನು ತೆರವುಗೊಳಿದರು. ಈ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮನವಿಗೆ ಸ್ಪಂದಿಸಿ ತ್ವರಿತಗತಿಯಲ್ಲಿ ನೂರಾರು ಹಳೆಯ ವಾಹನಗಳನ್ನು ತೆರವುಗೊಳಿಸಿದ್ದಕ್ಕಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರು ಪೊಲೀಸ್ ಇಲಾಖೆಗೆ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!