Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಅವರನ್ನ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿಲ್ಲ : ಸುದೀಪ್ ಹಿಂಗದಿಂದ್ಯಾಕೆ..?

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ.

ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು ಸಾಧ್ಯವಿಲ್ಲ ಅಂತ ನನಗೂ ಅನ್ನಿಸಿತ್ತು. ನನಗೂ ಪೊಲೀಸರು ಪರಿಚಯವಿದ್ದಾರೆ. ಸುಮ್ಮನೆ ಅಷ್ಟು ದೊಡ್ಡ ವ್ಯಕ್ತಿಯನ್ನು ಪೊಲೀಸರು ಕರೆದುಕೊಂಡು ಹೋಗುವುದಕ್ಕೆ ಸಾಧ್ಯವಿಲ್ಲ. ನನಗೆ ಆ ವಿಚಾರ ಒಂದು ರೀತಿಯ ಮೋಡ ಕವಿದ ವಾತಾವರಣವಾಗಿತ್ತು. ಏನು ಸತ್ಯ ಏನು ಸುಳ್ಳು ಎಂದು ತಿಳಿಯಲು ನ್ಯೂಸ್ ನೋಡುತ್ತಿದ್ದೆವು. ಒಂದಂತು ಸತ್ಯ. ಯಾರನ್ನ ಎಷ್ಟು ಇಷ್ಟ ಪಡುತ್ತೀರಿ..? ದ್ವೇಷ‌ ಮಾಡುತ್ತೀರಿ ಅನ್ನೋದು ಅವರವರ ವೈಯಕ್ತಿಕ ವಿಚಾರ. ಫೈಟ್ ಮಾಡ್ತೀವಿ, ಸ್ಪರ್ಧೆ ಇರುತ್ತದೆ. ಅದೆಲ್ಲವೂ ವೈಯಕ್ತಿಕವಾದದ್ದು.

ಆದರೆ ಆ ವ್ಯಕ್ತಿಗೆ ತೊಂದರೆಯಾಗ್ತಿದೆ ಎಂದರೆ ಖುಷಿ ಪಡುವ ವ್ಯಕ್ತಿ ನಾನಲ್ಲ. ನನಗೂ ನೋವಾಗಿದೆ. ನಮ್ಮ ಜೊತೆಗೆ ಮಾತನಾಡದಿದ್ದರೂ ಪರವಾಗಿಲ್ಲ, ಖುಷಿಯಾಗಿ ಓಡಾಡಿಕೊಂಡಿದ್ದರೆ ಸಾಕು ಅನ್ನಿಸುತ್ತೆ. ತೊಂದರೆ ಆದಾಗ ನನಗೂ ಅನ್ನಿಸಿದೆ ಯಾಕೆ ಬೇಕಿತ್ತು ಇದು ಅಂತ‌ ಎಂದು ಕಿಚ್ಚ ಸುದೀಪ್ ಬೇಸರ ಹೊರ ಹಾಕಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಅಂಬಿ-ವಿಷ್ಣು ಬಿಟ್ಟರೆ ಈ ಇಬ್ಬರ ಸ್ನೇಹವೇ ನೆಕ್ಸ್ಟ್ ಲೆವೆಲ್ ಗೆ ಇದ್ದದ್ದು. ಆದರೆ ಯಾವುದೋ ಕಾರಣಕ್ಕೆ ಆ ಸ್ನೇಹವೇ‌ ಮುರಿದು ಬಿದ್ದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...