Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ತೂರ್ ಪ್ರಕಾಶ್ ಕಿಡ್ನ್ಯಾಪ್ ಕೇಸ್ ಆರೋಪಿಗೆ ಗುಂಡೇಟು..!

Facebook
Twitter
Telegram
WhatsApp

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ಗುಂಡಿನ ಶಬ್ಧ ಕೇಳಿಸಿದೆ. ತಪ್ಪಿಸಿಕೊಳ್ಳುತ್ತಿದ್ದ ರೌಡಿಶೀಟರ್ ಹಿಡಿಯಲು ಪೊಲೀಸರು ಗುಂಡು ಹಾರಿಸಿದ್ದಾರೆ. ಲೋಹಿತ್ ಎಂಬಾತನ ಮೇಲೆ ಫೈರಿಂಗ್ ನಡೆದಿದೆ.

 

ರೌಡಿ ಶೀಟರ್ ಲೋಹಿತ್ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ. ಹೀಗಾಗಿ ಮೊದಲಿಗೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆತನಿಗೆ ವಾರ್ನಿಂಗ್ ಕೊಟ್ಟಿದ್ದರು. ಆದರೂ ಆದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇಂದಿರಾ ನಗರ ಠಾಣೆಯ ಪಿಎಸ್ಐ ಅಮರೇಶ್ ಜೇಗರಕಲ್ ಅವರು ಲೋಹಿತ್ ಬಲಗಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಕೇಸ್ ನಲ್ಲೂ ಈತನ ಹೆಸರು ಕೇಳಿ ಬಂದಿದೆ. ಅಷ್ಟೇ ಅಲ್ಲ ಲೋಹಿತ್ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಸುಮಾರು 17 ಕೇಸ್ ಗಳು ದಾಖಲಾಗಿವೆ. ಕೊಲೆ, ಕಿಡ್ನ್ಯಾಪ್ ಸೇರಿದಂತೆ ಹಕವು ಕ್ರಿಮಿನಲ್ ಪ್ರಕರಣದಲ್ಲಿ ಈತನ ಹೆಸರಿದೆ.

ಪತ್ತೆಯಾಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಆತನ ಪತ್ತೆಗೆ ಹಲಸೂರು ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಇಂದು ಆರೋಪಿಯು ಜೀವನ್ ಭೀಮಾನಗರ ಕಡೆಗೆ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಬೆಳಗ್ಗೆ ಪೊಲೀಸರು ಆತನ ಬೆನ್ನತ್ತಿದ್ದಾರೆ. ಈ ವೇಳೆ ಕಾನ್‌ಸ್ಟೇಬಲ್‌ ಮೇಲೆ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!