Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾಂಗ್ ರೇಪ್ ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿ : ಬಿವೈ ವಿಜಯೇಂದ್ರ ಆರೋಪ

---Advertisement---

ಹಾವೇರಿ: ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಈ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ. ಅಲ್ಲಿ ನೀಚ ಕೃತ್ಯ ನಡೆದಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅಲ್ಪ ಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಎಂದರೆ ಈ ಸರ್ಕಾರ ಏಕೆ ಇರಬೇಕು. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಬಂದಾಗಲೇ ಕಾನೂನು ಸಿವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ.

ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಪ್ರಕರಣವನ್ನು ನಾನು ಕೂಡ ಖಂಡಿಸುತ್ತೇನೆ. ಹಾನಗಲ್ ಪೊಲೀಸ್​ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಏಳು ಜನ ಆರೋಪಿಗಳು ಹಾನಗಲ್ ತಾಲೂಕಿನ ಅಕ್ಕಿ ಆಲೂರಿನವರು. ನ್ಯಾಯಾಧೀಶರ ಮುಂದೆ ಸಂತ್ರಸ್ಥ ಮಹಿಳೆ ಹೇಳಿಕೆ ಸಹ ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಹಾವೇರಿ ಸ್​ಪಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೆಲವರು ಟೀಕೆ ಟಿಪ್ಪಣಿ ಮಾಡ್ತಿದ್ದಾರೆ. ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸಲು ಬದ್ಧವಾಗಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

Leave a Comment