Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನಾಭರಣ ದೋಚಿದ ಕೇಸ್ ನಲ್ಲಿ ಪೊಲೀಸರೇ ಲಾಕ್ : ದಾವಣಗೆರೆಯಲ್ಲಿ ಏನಿದು ಅವಸ್ಥೆ..?

---Advertisement---

ದಾವಣಗೆರೆ: ಬೇಲಿ ಎದ್ದು ಹೊಲ‌ ಮೇಯ್ದಂಗೆ ಎಂಬ ಗಾದೆ ಮಾತನ್ನ ಹಿರಿಯರು ಸುಮ್ಮನೆ ಮಾಡಿಲ್ಲ. ಅದಕ್ಕೆ ಅಂತ ಕಣ್ಣ ಮುಂದೆ ಸಾಕಷ್ಟು ಉದಾಹರಣೆಗಳು ನಡೆದಿವೆ. ಈಗ ದಾವಣಗೆರೆಯಲ್ಲೂ ನಡೆದಿದೆ. ಚಿನ್ನಾಭರಣ ಕಳ್ಳತನದಲ್ಲಿ ಪೊಲೀಸರು ಕೂಡ ಭಾಗಿಯಾಗಿದ್ದಾರೆ. ಈಗ ಈ ಕೇಸಲ್ಲಿ ಇಬ್ಬರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರನ್ನು ಪೊಲೀಸರೇ ಬಂಧಿಸಿದ್ದಾರೆ. ಕೆಟಿಜೆ ನಗರದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

 

ಆಭರಣ ತಯಾರಕರೊಬ್ಬರಿಂದ 7.5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಆರೋಪದಲ್ಲಿ, ಪೂರ್ವ ವಲಯದ ಐಜಿಪಿ ಕಚೇರಿಯ ಇಬ್ಬರು ಪಿಎಸ್‌ಐಗಳು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರವಾರದ ಆಭರಣ ತಯಾರಕ ವಿಶ್ವನಾಥ್‌ ಅರ್ಕಸಾಲಿ ಅವರನ್ನು ಸೋಮವಾರ ನಸುಕಿನಲ್ಲಿ ಸುಲಿಗೆ ಮಾಡಿದ ಆರೋಪ ಇವರ ಮೇಲಿದೆ.

ವಿಶ್ವನಾಥ್ ಅವರು ಮಂಡಿಪೇಟೆ, ಹಳೆಪೇಟೆಯ ಕೆಲ ಆಭರಣ ಮಾರಾಟಗಾರರು. ಇವರು ಚಿನ್ನದ ಗಟ್ಟಿ ಹಾಗೂ ಹಳೆಯ ಉಂಗುರುಗಳನ್ನು ಸಂಗ್ರಹಿಸಿ ಭಾನುವಾರ ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಕಾರವಾರಕ್ಕೆ ಮರಳಲು ಹುಬ್ಬಳ್ಳಿ ಮಾರ್ಗದ ಬಸ್ ಏರಿದ ಅವರನ್ನು ಪಿಎಸ್‌ಐಗಳು ವಶಕ್ಕೆ ಪಡೆದಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ. ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಸಮೀಪದ ಕೆಟಿಜೆ ನಗರ ಪೊಲೀಸ್ ಠಾಣೆಯ ಬಳಿಗೆ ವಿಶ್ವನಾಥ್‌ ಅವರನ್ನು ಕರೆತಂದಿದ್ದಾರೆ. ಠಾಣೆಯ ಹೊರಭಾಗದಲ್ಲಿ ಕಾರು ನಿಲ್ಲಿಸಿ ಕೆಲಹೊತ್ತು ಠಾಣೆಯಲ್ಲಿದ್ದ ಪೊಲೀಸರೊಂದಿಗೆ ಚರ್ಚಿಸಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿಶ್ವನಾಥ್ ಅವರನ್ನು ಬೆದರಿಸಿ, ಅವರಿಂದ ಚಿನ್ನಾಭರಣ ದೋಚಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now