Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆಗೆ ಪೊಲೀಸರ ಕ್ರಮ : ಪ್ರಕರಣ ಕೈಬಿಡದಿದ್ದರೆ ಹೋರಾಟ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ಇದೇ ಸೆಪ್ಟೆಂಬರ್ 13 ರಂದು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 6 ಲಕ್ಷ ಜನ ಸೇರಿ ಬಹಳ ಅದ್ಭುತವಾಗಿ ಯಶಸ್ವಿಯಾಗಿದೆ. ಆದರೆ ಶೋಭಾಯಾತ್ರೆ ವೇಳೆ ಡಿಜೆ ಬಳಕೆ ಮಾಡಿದ ಡಿಜೆ ಮಾಲೀಕರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿರುವುದು ಎಷ್ಟು ಸರಿ ? ಎಂದು
ಶ್ರೀರಾಮ ಸೇನೆಯ ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.

ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕೆ ಕಾರಣವನ್ನು ಕೇಳಿದರೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಡಿಜೆ ಬಳಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ ಮುಸ್ಲಿಂರು ದಿನಕ್ಕೆ 5 ಬಾರಿ ನಮಾಜ್ ಮಾಡುವಾಗ ಅವರು ಬಳಸುವ ಧ್ವನಿವರ್ಧಕದ ಡೆಸಿಬೆಲ್ ಎಷ್ಟು ಅಂತ ಗೊತ್ತಾ ? ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ ? ಅವರುಗಳು ಅನುಮತಿ ತೆಗೆದುಕೊಂಡಿದ್ದಾರ ? ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ಕೇವಲ ಹಿಂದೂಗಳಿಗೆ ಮಾತ್ರ ಆದೇಶ ಮಾಡಿದೆಯಾ ? ಹಿಂದೂಗಳು ಮಾತ್ರ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದೇವಾ ಹೇಳಿ ಎಂದು ಕಿಡಿಕಾರಿ, ಡಿಜೆ ವಿಚಾರವಾಗಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣವನ್ನು ಕೂಡಲೇ ಕೈಬಿಡಬೇಕು ಇಲ್ಲದೆ ಹೋದರೆ ಇದೇ ವಿಚಾರವಾಗಿ ಇಡೀ ಹಿಂದೂ ಸಮಾಜದಿಂದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now