ಬೆಳಗಾವಿ: ಜೈನಮುನಿಗಳ ಹತ್ಯೆ ಪ್ರಕರಣ ಸಾಕಷ್ಟು ಸದ್ದು ಮಾಡಿದೆ. ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದರು. ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದಾರೆ. ಸದ್ಯ ಜೈನಮುನಿಗಳ ಹತ್ಯೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಹಲವು ಆಯಾಮಗಳಿಂದ ತನಿಖೆ ನಡೆಯುತ್ತಿದೆ.
ಸದ್ಯ ಪೊಲೀಸರು ಜೈನಮನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿಗಳ ಡೈರಿ ರಹಸ್ಯ ಕೆದಕುತ್ತಿದ್ದಾರೆ. ಕೊಲೆ ಆರೋಪದಲ್ಲಿ ಬಂಧಿಯಾಗಿರುವ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳು ಜೈನ ಮುನಿಗಳ ಡೈರಿಯನ್ನು ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ.
ಸದ್ಯ ಪೊಲೀಸರು ಮುನಿಗಳ ಡೈರಿ ಸುಟ್ಟ ಸ್ಥಳ ತೋರಿಸಲು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳ ಮೊಬೈಲ್ ನಲ್ಲಿ ಏನಾದರೂ ಸಾಕ್ಷ ಇದೆಯಾ..? ಯಾವಾಗ ಕರೆ ಮಾಡಿದ್ರು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುನಿಗಳ ಎರಡು ಫೋನ್, ಆರೋಪಿಗಳ ಎರಡು ಫೋನ್ ಎಫ್ಎಸ್ಎಲ್ ಗೆ ರವಾನೆ ಮಾಡಿದ್ದಾರೆ. ಹಾಗೇ ಡೈರಿ ಸುಟ್ಟ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











