Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

---Advertisement---

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ. ಈ ೧೦ ವರ್ಷದಲ್ಲಿ ರೈತರು ಹಿಂದುಳಿದವರ ಪರವಾಗಿ ಏನು ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, 4ನೇ ತಾರೀಖು ಚಿತ್ರದುರ್ಗಕ್ಕೆ ಬಂದಿದ್ದೆ. ಬಿಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿದ್ದೆ. ಪ್ರಿಯಾಂಕಾ ಗಾಂಧಿಯವರು ನಮ್ಮ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಬಂದಿದ್ದಾರೆ. ಅವರಿಗೆ ಕರ್ನಾಟಕ ಜನತೆಯ ಪರವಾಗಿ ನಾನು ಸ್ವಾಗತ ಮಾಡ್ತೀನಿ ಎಂದಿದ್ದಾರೆ‌.

 

ನಾನು ಬಿಜೆಪಿ ಸರ್ಕಾರ ಟೀಕೆ ಮಾಡಬೇಕು ಅಂತ ಹೇಳ್ತಿಲ್ಲ. ಆದ್ರೆ ಅವರ ಕೊಟ್ಟ ಮಾತು 10 ವರ್ಷವಾದ್ರು ಈಡೇರಿಸಿಲ್ಲ. ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣಾ ಸಮಯದಲ್ಲಿ ಮಾತ್ರ. ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಸಮಯದಲ್ಲಿ ಮಾತ್ರ ಬಂದಿದ್ದರು. ಪ್ರವಾಹ ಬಂದಾಗ ಬರಗಾಲ ಬಂದಾಗಲೂ ಸಹ ಮೋದಿ ಬಂದು ಕರ್ನಾಟಕ ಜನರ ಕಷ್ಟ ಕೇಳಿಲ್ಲ. ಮೋದಿನೂ ಬಂದಿಲ್ಲ ಅಮಿತ್ ಶಾ ಸಹ ಬಂದಿರಲ್ಲ. ಈಗ ಚುನಾವಣಾ ಅಂತ ಬರ್ತಿದ್ದಾರೆ.

 

ನರೇಂದ್ರ ಮೋದಿ ಅಲೆ ಎಲ್ಲಿಯೂ ಇಲ್ಲ. ಯಾಕೆ ಅಂದ್ರೆ ಅವರು ಹೇಳುವ ಸುಳ್ಳು ಜನರಿಗೆ ಅರ್ಥ ಆಗಿದೆ. ಕರ್ನಾಟಕದಲ್ಲಿ ಅಲೆ ಇರೋದು ಗ್ಯಾರಂಟಿ ಅಲೆ. 2013 ರಿಂದ‌ 2108 ರಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನ ನಾವು 165 ರಲ್ಲಿ 158 ಈಡಿರಿಸಿದ್ದೇವೆಮ. ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ. ಬಿಜೆಪಿ ಪ್ರಣಾಳಿಕೆ ಕೊಟ್ಟ ಭರವಸೆ ಈಡಿರಿಸಿಲ್ಲ. 600 ಭರವಸೆಯಲ್ಲಿ ೬೦ % ಸಹ ಈಡಿರಿಸಿಲ್ಲ. ವಿದೇಶದಲ್ಲಿ ಕಪ್ಪು ಹಣ ತಂದು 100 ದಿನಗಳಲ್ಲಿ ಎಲ್ಲಾ ಅಕೌಂಟ್ ಗೆ ಜಮಾ ಮಾಡ್ತೀನಿ ಎಂದಿದ್ದರು. 15 ಲಕ್ಷ ಇರಲಿ 15 ಪೈಸೆ ಸಹ ನೀವು ಕೊಟ್ಟಿಲ್ಲ. 2 ಕೋಟಿ ಉದ್ಯೋಗ ಕೊಡ್ತೀನಿ ಎಂದ್ರು ಕೊಟ್ಟಾರಾ..? ಎಂದು ಪ್ರಶ್ನೆ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment