Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನಿನ್ನೂ ಸತ್ತಿಲ್ಲ ಎಂದ ಪೂನಂ ಪಾಂಡೆ : ಪೋಸ್ಟ್ ಮಾಡಿ ಮಾಡಿದ ನಾಟಕಗಳೇನು..?

Facebook
Twitter
Telegram
WhatsApp

ನಿನ್ನೆಯೆಲ್ಲಾ ಮಾಡೆಲ್ ಕಮ್ ನಟಿ ಪೂನಂ ಪಾಂಡೆ ಸಾವುನ ಸುದ್ದಿಯೇ ಓಡಾಡುತ್ತಿತ್ತು. 32 ವರ್ಷಕ್ಕೆ ಸಾವನ್ನಪ್ಪಿದ ನಟಿಗೆ ಸಂತಾಪ ಸೂಚಿಸಿದವರೇ ಹೆಚ್ಚು. ಆದರೆ ಈಗ ದಿಢೀರನೆ ಪ್ರತ್ಯಕ್ಷವಾಗಿದ್ದಾರೆ. ವಿಡಿಯೋ ಮಾಡಿ, ಪೋಸ್ಟ್ ಮಾಡುವ ಮೂಲಕ ತಾನೂ ಬದುಕಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ನಾನು ಸತ್ತಿಲ್ಲ, ಬದುಕಿದ್ದೇನೆ. ಆದರೆ ಗರ್ಭಕಂಠದ ಕ್ಯಾನ್ಸರ್‌ ನ ಜಾಗೃತಿಗಾಗಿ ಈ ರೀತಿಯ ಸುಳ್ಳು ಹೇಳಿದ್ದೇನೆ. ದಯಮಾಡಿ ಕ್ಷಮಿಸಿ. ಆದರೆ ನನ್ನ ಸಾವಿನ ಸುದ್ದಿಯಿಂದಾಗಿ ಪ್ರತಿಯೊಬ್ಬರು ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮತನಾಡಿದ್ದಾರೆ. ನಾನು ನನ್ನ ಸಾವಿನ ವಿಚಾರವಾಗಿ ಸುಳ್ಳು ಹೇಳಿದ್ದು ತಪ್ಪು. ಅದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಫೆಬ್ರವರಿ 2ರಂದು ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಆಕೆಯ ಕುಟುಂಬಸ್ಥರು ಈ ಸಾವಿನ ಸುದ್ದಿಯನ್ನು ನಂಬಿರಲಿಲ್ಲ. ಜೊತೆಗೆ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.‌ಪೂನಂ ಪಾಂಡೆ ಬಾಡಿಗಾರ್ಡ್ ಕೂಡ ಈ ಸುದ್ದಿಯನ್ನು ಒಪ್ಪಿರಲಿಲ್ಲ. ಹೀಗಾಗಿಯೇ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿದ್ದವು.

ಪೂನಂ ಪಾಂಡೆ ಸಾವಿನ ಸುದ್ದಿ ಬೇಗನೇ ಎಲ್ಲೆಡೆ ಹರಡಿತ್ತು. ಕೇವಲ 32 ವರ್ಷಕ್ಕೆ ಇಂಥ ಸಾವು ಬರಬಾರದಿತ್ತು ಎಂದೇ ಎಲ್ಲರು ಶಪಿಸಿದರು, ಮರುಗಿದರು. ಆದರೆ ಇಂದು ದಿಢೀರ್ ವಿಡಿಯೋ ಮೂಲಕ ಪ್ರತ್ಯಕ್ಷವಾದ ಪೂನಂ ಪಾಂಡೆ, ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡೊಸುವ ಕಾರಣಕ್ಕೆ ಈ ರೀತಿಯ ಸುಳ್ಳು ಹೇಳಬೇಕಾಗಿ ಬಂತು. ದಯವಿಟ್ಟು ನನ್ನ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ‌. ಇನ್ನು ಪೂನಂ ಪಾಂಡೆ ಗರ್ಭ ಕಂಠದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!