ಕಡೆಗೂ ಮಣಿದ ಸರ್ಕಾರ : ಪಿಎಸ್ಐ ಪರೀಕ್ಷೆ ಮುಂದೂಡಿಕೆ..!

 

ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯ ದಿನವೇ ಪಿಎಸ್ಐ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಇದರಿಂದ ಅಭ್ಯರ್ಥಿಗಳಿಗೆ ಕಷ್ಟವಾಗುತ್ತೆ ಎಂದು ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ಆದರೆ ಪರೀಕ್ಷೆ ಮುಂದೂಡುವ ಪ್ರಮೇಯವೇ ಇಲ್ಲ ಎಂದು ಸರ್ಕಾರ ಹೇಳುತ್ತಲೇ ಬಂದಿತ್ತು. ನಿಗಧಿತ ಸಮಯಕ್ಕೇನೆ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು. ಆದರೆ ಈಗ ಅಭ್ಯರ್ಥಿಗಳ ಮನವಿಗೆ ಸರ್ಕಾರ ಮಣಿದಿದೆ. ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ. ಈ ಬಗ್ಗೆ ಗೃಹ ಸಚುವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಿಎಸ್ಐ ಪರೀಕ್ಷೆ ಮುಂದೂಡುವ ವಿಚಾರವಾಗಿ ಮಾತನಾಡಿದ ಪರಮೇಶ್ವರ್ ಅವರು, ಒಂದು ಶನಿವಾರ ಸ್ಲಾಟ್ ನೀಡುವಂತೆ ಮನವಿ ಮಾಡಲಾಗಿದೆ. ಪಿಎಸ್ಐ ಪರೀಕ್ಷೆ 22ಕ್ಕೆ ನಿಗಧಿಯಾಗಿತ್ತು. ಆದರೆ ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಯುಪಿಎಸ್ಸಿ ಎಕ್ಸಾಂ ಕೂಡ ಅದೇ ದಿನ ನಡೆಯುತ್ತಿದೆ. ಹೀಗಾಗಿ ಮುಂದೂಡುವಂತೆ ಮನವಿ‌ ಮಾಡಿದ್ದರು. ಬಿಜೆಪಿಯ ಅಶ್ವತ್ಥ್ ನಾರಾಯಣ್ ಅವರು ಕೂಡ ಮನವಿ ಮಾಡಿದ್ದರು. KEA ಯವರು ಕೂಡ ಡಿಸೆಂಬರ್ ತನಕ ಯಾವುದೇ ಸ್ಲಾಟ್ ಇಲ್ಲ ಎಂದಿದ್ದರು. ಈ ವಿಚಾರವಾಗಿ ಶಿಕ್ಷಣ ಅಚಿವ ಮಧು ಬಂಗಾರಪ್ಪ ಬಳಿಯೂ ಮಾತನಾಡಿದೆ. ಒಂದು ಶನಿವಾರ ಸ್ಲಾಟ್ ನೀಡಿವಂತೆ ಮನವಿ ಮಾಡಲಾಗಿದೆ. ಸದ್ಯಕ್ಕೆ 402 ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದೆ. ಇದೇ ತಿಂಗಳ 28ಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಪರೀಕ್ಷೆಯನ್ನು ಅದೇ ಸಮಯಕ್ಕೆ‌ ಮಾಡುವುದು ಬೇಡ ಎಂದು ಅಭ್ಯರ್ಥಿಗಳು ಸಾಕಷ್ಟು ಮನವಿ ಮಾಡಿದ್ದರು. ಇದೀಗ ಪರೀಕ್ಷೆ ಮುಂದೂಡಿಕೆಯಾಗಿದ್ದು, ಅಭ್ಯರ್ಥಿಗಳು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

suddionenews

Recent Posts

ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…

41 minutes ago

ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ

ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…

1 hour ago

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

9 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

13 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

13 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

13 hours ago