ಚಿತ್ರದುರ್ಗ ಗ್ರಾಮೀಣ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಆಗಸ್ಟ್ 12 ಮತ್ತು 13 ರಂದು ವಿದ್ಯುತ್ ವ್ಯತ್ಯಯ

1 Min Read

 

ಚಿತ್ರದುರ್ಗ. ಆ.11: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖಾ ವ್ಯಾಪ್ತಿಯ ಜಾನುಕೊಂಡ ಗ್ರಾಮದ ಹತ್ತಿರ ಎಲ್.ಟಿ ಮಾರ್ಗದ ವಾಹಕ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11 ಕೆವಿ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-8 ಸೋಲ್ಲಾಪುರ ಎನ್.ಜೆ.ವೈ 11ಕೆವಿ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

ಪಂಡರಹಳ್ಳಿ ವ್ಯಾಪ್ತಿಯ ಜಾನುಕೊಂಡ, ಸಿದ್ದಾಪುರ, ಮಾಳಪ್ಪನಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *