Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದ್ಯುತ್ ವ್ಯತ್ಯಯ : ಕರೆಂಟ್ ಗಾಗಿ‌ ಕನವರಿಸಿದ ಕೋಟೆ ನಾಡಿನ ಜನರು : ಕಾರಣ ಏನು ಗೊತ್ತಾ ?

---Advertisement---

ಸುದ್ದಿಒನ್, ಚಿತ್ರದುರ್ಗ, ಆ.31 : ಕರೆಂಟ್…ಕರೆಂಟ್…ಕರೆಂಟ್ ಯಾರ ಬಾಯಲ್ಲಿ ಕೇಳಿದರೂ ಕರೆಂಟ್ ನದ್ದೇ ಸುದ್ದಿ. ಕರೆಂಟ್ ಯಾವಾಗ ಬರುತ್ತೆ, ನಿಮಗೆ ಗೊತ್ತಾ ? ಕೆಇಬಿಯವರು ಫೋನ್ ತೆಗೀತಿಲ್ಲ, ಅಂತ ಇಂದು (ಗುರುವಾರ) ಸಂಜೆ ಬಹುತೇಕ ಎಲ್ಲರ ಬಾಯಲ್ಲೂ ಇದೇ ಮಾತು. ಯಾಕೆಂದರೆ ಇಂದು ಮಧ್ಯಾನ್ಹದಿಂದ ಸಂಜೆ ವರೆಗೂ ನಗರ ಪ್ರದೇಶ ಅಷ್ಟೇ ಅಲ್ಲದೇ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ಜನರು ಸಾಕಷ್ಟು ಪರದಾಡುವಂತಾಯಿತು.

ಸಾಮಾನ್ಯವಾಗಿ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯ ಇದ್ದರೆ ಬೆಸ್ಕಾಂನವರು ಒಂದು ಅಥವಾ ಎರಡು ದಿನಗಳ ಮುಂಚಿತವಾಗಿ ಪ್ರಕಟಣೆಯಲ್ಲಿ ತಿಳಿಸುತ್ತಾರೆ. ಆದರೆ ಇಂದು ಮಾತ್ರ ಹಾಗಾಗಲಿಲ್ಲ. ಇದ್ದಕ್ಕಿದ್ದಂತೆ ಕರೆಂಟ್ ಹೋಗಿ ಸತತ ಆರು ಗಂಟೆಗಳ ಕಾಲ ಕರೆಂಟ್ ಇಲ್ಲದಂತಾಗಿ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಯಿತು.

ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ವ್ಯತ್ಯಯದ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲದ ಕಾರಣ ಸಾರ್ವಜನಿಕರು, ವಿದ್ಯಾರ್ಥಿಗಳು, ಗೃಹಿಣಿಯರು,  ಸಣ್ಣ ಉದ್ಯಮಿಗಳು, ಹೋಟೆಲ್‌, ದಿನಿಸಿ ಅಂಗಡಿ ಮೊದಲಾದ ಸ್ಥಳಗಳಲ್ಲಿ  ವ್ಯಾಪಾರ ವಹಿವಾಟು ನಡೆಸುವವರು ಹೀಗೆ ಬಹುತೇಕ ಎಲ್ಲಾ ವರ್ಗದ ಎಲ್ಲಾ ವಯೋಮಾನದವರಿಗೂ ಕರೆಂಟ್ ಬಿಸಿ ತಟ್ಟಿತ್ತು.

ಮಳೆ, ಗಾಳಿ ಅಭಾವದಿಂದ ಶೇ. 50 ರಷ್ಟು ವಿದ್ಯುತ್‌ ಉತ್ಪಾದನೆಯಲ್ಲಿ ಇಳಿಕೆಯಾಗಿದೆ. LDC (Load Dispatch Center) ನಲ್ಲಿ ವಿದ್ಯುತ್ ಸಮತೋಲನೆ ಮಾಡಲು ಕೆಲವು ಸಂದರ್ಭಗಳಲ್ಲಿ ಈ ರೀತಿಯಾಗಿ ಯಾವುದೇ ಮುನ್ಸೂಚನೆ ಇಲ್ಲದೇ ವಿದ್ಯುತ್ ವ್ಯತ್ಯಯ ಮಾಡಲಾಗುತ್ತದೆ ಎಂದು ಬೆಸ್ಕಾಂ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ವಿದ್ಯುತ್‌ ವ್ಯತ್ಯಯಕ್ಕೆ ವಿಷಾದಿಸಿರುವ ಬೆಸ್ಕಾಂ ಇಲಾಖೆ ಸಹಕರಿಸುವಂತೆ ಮನವಿ ಮಾಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment