Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಭಾಕರ್ ಭಟ್ ರನ್ನು ಬಂಧಿಸಲ್ಲ.. ಹೈಕೋರ್ಟ್ ಗೆ ತಿಳಿಸಿದ ಸರ್ಕಾರ..!

---Advertisement---

ಇತ್ತಿಚೆಗೆ ದ್ವೇಷ ಬಿತ್ತುವ ಭಾಷಣ ಮಾಡಿದ್ದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಾಗಿತ್ತು. ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾದ ಭಾಷಣದ ಆರೋಪದ ಮೇಲೆ ಶ್ರೀರಂಗಪಟ್ಟಣದಲ್ಲಿ ದೂರು ದಾಖಲಿಸಲಾಗಿತ್ತು. ಈ ಎಫ್ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಈ ಸಂಬಂಧ ವಿಚಾರಣೆ ನಡೆದಿದೆ.

 

ಹೈಕೋರ್ಟ್ ನಲ್ಲಿ ಪ್ರಭಾಕರ್ ಭಟ್ ಪರವಾಗಿ ವಾದ ಮಂಡಿಸಿದ ವಕೀಲರು, ಇದು ರಾಜಕೀಯ ಪ್ರೇರಿತ ದೂರು ಆರೋಪಿ ವಯೋವೃದ್ಧರು. ಅನರೋಗ್ಯದಿಂದ ಬಳಲುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಬಂಧನ ಮಾಡದಂತೆ ನಿರ್ದೇಶನ ಮಾಡಬೇಕು‌. ಪ್ರಭಾಕರ ಭಟ್ ವಿರುದ್ಧ ಸರ್ಕಾರ ರೌಡಿ ಶೀಟ್ ಓಪನ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಇದೇ ವೇಳೆ ದೂರುದಾರೆಯ ಪರ ವಕೀಲರು, ಆರೋಪಿಯ ಹೇಳಿಕೆಯನ್ನು ಗಮನಿಸಬೇಕು. ಮುಸ್ಲಿಂ ಮಹಿಳೆಯರಿಗೆ ಒಬ್ಬ ಗಂಡ ಅಲ್ಲ, ದಿನಕ್ಕೊಬ್ಬ ಗಂಡ ಎಂದಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತದೆ. ಪೊಲೀಸರು ಹಾಕಿರುವ ಎಲ್ಲಾ ಸೆಕ್ಷನ್ ಗಳು ಸರಿಯಾಗಿವೆ. ಈ ಪ್ರಕರಣದ ಸಂಪೂರ್ಣ ತನಿಖೆಯಾಗಬೇಕು. ಕಾನೂನು ಅದರ ಕೆಲಸ ಮಾಡಲಿ ಎಂದಿದ್ದಾರೆ.

ಇನ್ನು ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯ ಬಗ್ಗೆ ನಾವೂ ತನಿಖೆ ನಡೆಸುತ್ತೇವೆ. ಆದರೆ ಸದ್ಯಕ್ಕೆ ಅವರನ್ನು ಬಂಧಿಸುವುದಿಲ್ಲ ಎಂದು ಕೋರ್ಟ್ ಗೆ ತಿಳಿಸಿದೆ. ವಾದ-ಪ್ರತಿವಾದ ಆಲಿಸಿರುವ ಹೈಕೋರ್ಟ್, ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಂಧನದಿಂದ ಮಧ್ಯಂತರ ಪರಿಹಾರ ನೀಡಿ, ಜನವರಿ 9 ಕ್ಕೆ ವಿಚಾರಣೆ ಮುಂದೂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...